ಹೈದರಾಬಾದ್ : ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ವಿವಾದದ ನಡುವೆಯೇ ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ಗೆ ತ್ರಿವರ್ಣ ಬಣ್ಣ ಬಳಿಯಲಾಗಿದೆ. ಇಲ್ಲಿ ಶೀಘ್ರದಲ್ಲೇ ರಾಷ್ಟ್ರಧ್ವಜ ಹಾರಿಸಲಾಗುವುದು. ಜನವರಿಯಲ್ಲಿ ಕೆಲವರು ಜಿನ್ನಾ ಟವರ್ ಗೆ ಪ್ರವೇಶಿಸಿದ್ದರು. ಬಳಿಕ ಇಲ್ಲಿ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಕಾವು ಪಡೆದಿತ್ತು. ಗುಂಟೂರಿನ ಮಾಜಿ ಶಾಸಕ ಮೊಹಮ್ಮದ್ ಮುಸ್ತಫಾ ಇದಕ್ಕೆ ತ್ರಿವರ್ಣ ಧ್ವಜದ ಬಣ್ಣ ಬಳಿದಿದ್ದರು. ಈ ನಿಟ್ಟಿನಲ್ಲಿ ಹಲವು ಸಂಘಟನೆಗಳು ಮುಂದೆ ಬಂದಿದ್ದವು ಹೀಗಾಗಿ ಗೋಪುರಕ್ಕೆ ಬಣ್ಣ ಬಳಿಯಲು ನಿರ್ಧರಿಸಲಾಯಿತು. ತ್ರಿವರ್ಣ ಧ್ವಜದ ಬಣ್ಣದಿಂದ ಸಿಂಗರಿಸಿ, ಈ ಗೋಪುರದ ಮೇಲೆ ಕಂಬವನ್ನು ಸ್ಥಾಪಿಸಲಾಗಿದೆ, ಫೆಬ್ರವರಿ 3 ರಂದು ಅದರ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ.
ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜವನ್ನು ಹಾರಿಸಲು ಕೆಲವರು ಜಿನ್ನಾ ಗೋಪುರವನ್ನು ಪ್ರವೇಶಿಸಿದ್ದರು. ಆದರೆ, ವಿವಾದ ತಡೆಯಲು ಪೊಲೀಸರು ಅವರನ್ನು ಬಂಧಿಸಿದ್ದರು. ಬಿಜೆಪಿಯ ಆಂಧ್ರಪ್ರದೇಶ ಘಟಕವು ಈ ಬಗ್ಗೆ ಕಳೆದ ವರ್ಷ ಡಿಸೆಂಬರ್ನಲ್ಲಿ ಗುಂಟೂರು ಮಹಾನಗರ ಪಾಲಿಕೆ ಆಯುಕ್ತ ಚಲ್ಲಾ ಅನುರಾಧ ಅವರಿಗೆ ಮನವಿ ಸಲ್ಲಿಸಿತ್ತು. ಇದರಲ್ಲಿ ಗೋಪುರಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…