ಹೈದರಾಬಾದ್ : ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ವಿವಾದದ ನಡುವೆಯೇ ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ಗೆ ತ್ರಿವರ್ಣ ಬಣ್ಣ ಬಳಿಯಲಾಗಿದೆ. ಇಲ್ಲಿ ಶೀಘ್ರದಲ್ಲೇ ರಾಷ್ಟ್ರಧ್ವಜ ಹಾರಿಸಲಾಗುವುದು. ಜನವರಿಯಲ್ಲಿ ಕೆಲವರು ಜಿನ್ನಾ ಟವರ್ ಗೆ ಪ್ರವೇಶಿಸಿದ್ದರು. ಬಳಿಕ ಇಲ್ಲಿ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಕಾವು ಪಡೆದಿತ್ತು. ಗುಂಟೂರಿನ ಮಾಜಿ ಶಾಸಕ ಮೊಹಮ್ಮದ್ ಮುಸ್ತಫಾ ಇದಕ್ಕೆ ತ್ರಿವರ್ಣ ಧ್ವಜದ ಬಣ್ಣ ಬಳಿದಿದ್ದರು. ಈ ನಿಟ್ಟಿನಲ್ಲಿ ಹಲವು ಸಂಘಟನೆಗಳು ಮುಂದೆ ಬಂದಿದ್ದವು ಹೀಗಾಗಿ ಗೋಪುರಕ್ಕೆ ಬಣ್ಣ ಬಳಿಯಲು ನಿರ್ಧರಿಸಲಾಯಿತು. ತ್ರಿವರ್ಣ ಧ್ವಜದ ಬಣ್ಣದಿಂದ ಸಿಂಗರಿಸಿ, ಈ ಗೋಪುರದ ಮೇಲೆ ಕಂಬವನ್ನು ಸ್ಥಾಪಿಸಲಾಗಿದೆ, ಫೆಬ್ರವರಿ 3 ರಂದು ಅದರ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ.
ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜವನ್ನು ಹಾರಿಸಲು ಕೆಲವರು ಜಿನ್ನಾ ಗೋಪುರವನ್ನು ಪ್ರವೇಶಿಸಿದ್ದರು. ಆದರೆ, ವಿವಾದ ತಡೆಯಲು ಪೊಲೀಸರು ಅವರನ್ನು ಬಂಧಿಸಿದ್ದರು. ಬಿಜೆಪಿಯ ಆಂಧ್ರಪ್ರದೇಶ ಘಟಕವು ಈ ಬಗ್ಗೆ ಕಳೆದ ವರ್ಷ ಡಿಸೆಂಬರ್ನಲ್ಲಿ ಗುಂಟೂರು ಮಹಾನಗರ ಪಾಲಿಕೆ ಆಯುಕ್ತ ಚಲ್ಲಾ ಅನುರಾಧ ಅವರಿಗೆ ಮನವಿ ಸಲ್ಲಿಸಿತ್ತು. ಇದರಲ್ಲಿ ಗೋಪುರಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.
ಇದನ್ನೂ ಓದಿ :
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…