Featured

ಆಕರ್ಷಣೀಯ ಪ್ರವಾಸಿ ತಾಣ ಮಲ್ಪೆ ಸೇಂಟ್ ಮೇರಿಸ್ ದ್ವೀಪಕ್ಕೆ ಸ್ಪೀಡ್‌ಬೋಟ್‌ ಸೇವೆ ಆರಂಭ -Vishwanews24

ಮಲ್ಪೆ: ಕರಾವಳಿಯ ಅತ್ಯಂತ ಆಕರ್ಷಣೀಯ ಪ್ರವಾಸಿ ತಾಣ ಮಲ್ಪೆ ಸೈಂಟ್‌ಮೇರಿಸ್ ದ್ವೀಪಕ್ಕೆ ಸ್ಪೀಡ್‌ಬೋಟ್‌ ಸೇವೆ ಸೆ. 15ರಿಂದ ಆರಂಭಗೊಂಡಿದೆ. ಇದು ಮಲ್ಪೆ ಬೀಚ್‌ನಿಂದ ಹೊರಡಲಿದ್ದು ಕೇವಲ 15ನಿಮಿಷಗಳಲ್ಲಿ ತಲುಪಲು ಸಾಧ್ಯವಾಗಲಿದೆ.

ಜೈ ಹನುಮಾನ್‌, ಜ್ಞಾನಜ್ಯೋತಿ, ಸೀಬರ್ಡ್‌ ಮತ್ತು ಇಂಡಿಯನ್‌ ಒಟ್ಟು 4 ಸ್ಪೀಡ್‌ ಬೋಟ್‌ಗಳು ಸೇವೆಗೆ ಇದೆ. ಒಂದು ಬೋಟಿನಲ್ಲಿ ಚಾಲಕರು,ನಿರ್ವಾಹಕರು ಸೇರಿದಂತೆ 14 ಮಂದಿಗೆ ಮಾತ್ರ ತೆರಳಲು ಅವಕಾಶ ವಿದ್ದು, ಯಾನಕ್ಕಾಗಿ ಕಾಯುವ ಪ್ರಮೇಯ ಇರುವುದಿಲ್ಲ. ಮಾತ್ರವಲ್ಲದೆ ದ್ವೀಪದಲ್ಲೂ ಹೆಚ್ಚು ಹೊತ್ತು ಸುತ್ತಾಡಿ ಕಾಲ ಕಳೆಯುವ ಅವಕಾಶ ನೀಡ ಲಾಗುತ್ತದೆ.

ಬೋಟ್‌ಗಳು ಅತ್ಯಾಧುನಿಕ ಸೌಕರ್ಯ ಹೊಂದಿದ್ದು, ಪ್ರತಿ ಬೋಟಿನಲ್ಲಿ ಇಬ್ಬರು ನುರಿತ ಈಜುಗಾರರು, ಲೈಫ್‌ಬಾಯ್‌, ಲೈಫ್‌ ಜಾಕೆಟ್‌ ಸಹಿತ ಸುರಕ್ಷಿತ ಸಾಧನಗಳು ಪ್ರಯಾಣಿಕರಿಗೆ ಲಭಿಸಲಿದೆ.

ಕಳೆದ 11 ವರ್ಷಗಳಿಂದ ಬೋಟಿ ನಲ್ಲಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾ, ಉತ್ತಮ ಸೇವೆ ಕಾಪಾಡಿ ಕೊಂಡು ಬಂದಿದ್ದು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಂದ ಸಂಸ್ಥೆಗೆ ಪ್ರಶಂಸಾ ಪತ್ರ ದೊರಕಿದೆ. ಸ್ಪೀಡ್‌ಬೋಟ್‌ನ ಟಿಕೆಟ್‌ ಕೌಂಟರ್‌ನ್ನು ಬೀಚ್‌ ಗಾಂಧಿ ಪ್ರತಿಮೆಯ ಬಳಿ ತೆರೆಯಲಾಗಿದೆ ಎಂದು ಟೂರಿಸ್ಟ್‌ ಬೋಟಿನ ಪ್ರಮುಖ ನಿರ್ವಾಹಕ ಸನತ್‌ ಸಾಲ್ಯಾನ್‌ ತಿಳಿಸಿದ್ದಾರೆ.

ಸದ್ಯ ಆರಂಭಗೊಂಡ ಬೀಚ್ ಸ್ಪೀಡ್ ಬೋಟ್‌ಗಳಲ್ಲಿ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿದ್ದರೂ(ಕನಿಷ್ಠ 4 ಮಂದಿ) ಅವರನ್ನು ದ್ವೀಪಕ್ಕೆ ಕರೆದೊಯ್ಯಲಾಗುತ್ತದೆ. ಬೆಳಗ್ಗೆ 8ರಿಂದ ಸಾಯಂಕಾಲ 5.30 ಗಂಟೆವರೆಗೆ ಬೀಚ್ ಬೋಟುಗಳು ಕಾರ್ಯನಿರ್ವಹಿಸುತ್ತವೆೆ. ಈ ಬೋಟ್‌ನಲ್ಲಿ 12 ಪ್ರವಾಸಿಗರು ಕುಳಿತುಕೊಳ್ಳಬಹುದು. ಬೀಚ್‌ನಿಂದ ತೆರಳಲು 15 ನಿಮಿಷ ಅವಧಿ ಬೇಕಾಗುತ್ತದೆ, ಪ್ರವಾಸಿಗರಿಗೆ ಸಮಯದ ನಿರ್ಬಂಧವಿಲ್ಲ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago