Featured

ಆಕರ್ಷಣೀಯ ಪ್ರವಾಸಿ ತಾಣ ಮಲ್ಪೆ ಸೇಂಟ್ ಮೇರಿಸ್ ದ್ವೀಪಕ್ಕೆ ಸ್ಪೀಡ್‌ಬೋಟ್‌ ಸೇವೆ ಆರಂಭ -Vishwanews24

ಮಲ್ಪೆ: ಕರಾವಳಿಯ ಅತ್ಯಂತ ಆಕರ್ಷಣೀಯ ಪ್ರವಾಸಿ ತಾಣ ಮಲ್ಪೆ ಸೈಂಟ್‌ಮೇರಿಸ್ ದ್ವೀಪಕ್ಕೆ ಸ್ಪೀಡ್‌ಬೋಟ್‌ ಸೇವೆ ಸೆ. 15ರಿಂದ ಆರಂಭಗೊಂಡಿದೆ. ಇದು ಮಲ್ಪೆ ಬೀಚ್‌ನಿಂದ ಹೊರಡಲಿದ್ದು ಕೇವಲ 15ನಿಮಿಷಗಳಲ್ಲಿ ತಲುಪಲು ಸಾಧ್ಯವಾಗಲಿದೆ.

ಜೈ ಹನುಮಾನ್‌, ಜ್ಞಾನಜ್ಯೋತಿ, ಸೀಬರ್ಡ್‌ ಮತ್ತು ಇಂಡಿಯನ್‌ ಒಟ್ಟು 4 ಸ್ಪೀಡ್‌ ಬೋಟ್‌ಗಳು ಸೇವೆಗೆ ಇದೆ. ಒಂದು ಬೋಟಿನಲ್ಲಿ ಚಾಲಕರು,ನಿರ್ವಾಹಕರು ಸೇರಿದಂತೆ 14 ಮಂದಿಗೆ ಮಾತ್ರ ತೆರಳಲು ಅವಕಾಶ ವಿದ್ದು, ಯಾನಕ್ಕಾಗಿ ಕಾಯುವ ಪ್ರಮೇಯ ಇರುವುದಿಲ್ಲ. ಮಾತ್ರವಲ್ಲದೆ ದ್ವೀಪದಲ್ಲೂ ಹೆಚ್ಚು ಹೊತ್ತು ಸುತ್ತಾಡಿ ಕಾಲ ಕಳೆಯುವ ಅವಕಾಶ ನೀಡ ಲಾಗುತ್ತದೆ.

ಬೋಟ್‌ಗಳು ಅತ್ಯಾಧುನಿಕ ಸೌಕರ್ಯ ಹೊಂದಿದ್ದು, ಪ್ರತಿ ಬೋಟಿನಲ್ಲಿ ಇಬ್ಬರು ನುರಿತ ಈಜುಗಾರರು, ಲೈಫ್‌ಬಾಯ್‌, ಲೈಫ್‌ ಜಾಕೆಟ್‌ ಸಹಿತ ಸುರಕ್ಷಿತ ಸಾಧನಗಳು ಪ್ರಯಾಣಿಕರಿಗೆ ಲಭಿಸಲಿದೆ.

ಕಳೆದ 11 ವರ್ಷಗಳಿಂದ ಬೋಟಿ ನಲ್ಲಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾ, ಉತ್ತಮ ಸೇವೆ ಕಾಪಾಡಿ ಕೊಂಡು ಬಂದಿದ್ದು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಂದ ಸಂಸ್ಥೆಗೆ ಪ್ರಶಂಸಾ ಪತ್ರ ದೊರಕಿದೆ. ಸ್ಪೀಡ್‌ಬೋಟ್‌ನ ಟಿಕೆಟ್‌ ಕೌಂಟರ್‌ನ್ನು ಬೀಚ್‌ ಗಾಂಧಿ ಪ್ರತಿಮೆಯ ಬಳಿ ತೆರೆಯಲಾಗಿದೆ ಎಂದು ಟೂರಿಸ್ಟ್‌ ಬೋಟಿನ ಪ್ರಮುಖ ನಿರ್ವಾಹಕ ಸನತ್‌ ಸಾಲ್ಯಾನ್‌ ತಿಳಿಸಿದ್ದಾರೆ.

ಸದ್ಯ ಆರಂಭಗೊಂಡ ಬೀಚ್ ಸ್ಪೀಡ್ ಬೋಟ್‌ಗಳಲ್ಲಿ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿದ್ದರೂ(ಕನಿಷ್ಠ 4 ಮಂದಿ) ಅವರನ್ನು ದ್ವೀಪಕ್ಕೆ ಕರೆದೊಯ್ಯಲಾಗುತ್ತದೆ. ಬೆಳಗ್ಗೆ 8ರಿಂದ ಸಾಯಂಕಾಲ 5.30 ಗಂಟೆವರೆಗೆ ಬೀಚ್ ಬೋಟುಗಳು ಕಾರ್ಯನಿರ್ವಹಿಸುತ್ತವೆೆ. ಈ ಬೋಟ್‌ನಲ್ಲಿ 12 ಪ್ರವಾಸಿಗರು ಕುಳಿತುಕೊಳ್ಳಬಹುದು. ಬೀಚ್‌ನಿಂದ ತೆರಳಲು 15 ನಿಮಿಷ ಅವಧಿ ಬೇಕಾಗುತ್ತದೆ, ಪ್ರವಾಸಿಗರಿಗೆ ಸಮಯದ ನಿರ್ಬಂಧವಿಲ್ಲ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago