ಕಾರ್ಕಳ : ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ,ಸಿಬ್ಬಂದಿಗಳಾದ ಉದಯ್ ಕುಮಾರ್ ಹೆಗ್ಡೆ ,ಅಚ್ಚುತ್ ಕರ್ಕೇರಾ, ಜಯ ಮೂಲ್ಯ , ಮಹ್ಮ್ಮದ್ ರಫೀಕ್ , ಕೇಶವ್ ,ಸುಜಯ್ ,ಉಮೇಶ್,ಬಸವರಾಜ್,ರವಿಚಂದ್ರ,ವಿನಾಯಕ್ ,ಸಂಜಯ್ ಮತ್ತು ಮುಜಮಿಲ್ ಪಾಲ್ಗೊಂಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…