Featured

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಸೋಮವಾರ ಡಿಸೆಂಬರ್ 20 ರ ಸಂಜೆ ಆಕಾಶದಲ್ಲಿ ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ದೀಪಗಳಂತಿರುವ ನಿಗೂಢ ಹಾರುವ ವಸ್ತುವನ್ನು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದರು.

ಆದರೆ ಇದು ಖಾಸಗಿ ಟೆಲಿಕಾಂ ಕಂಪನಿಗಳು ಬಿಡುವ ಕೃತಕ ಉಪಗ್ರಹಗಳಾಗಿವೆ ಎಂದು ಖಗೋಳಶಾಸ್ತಜ್ಞರು ತಿಳಿಸಿದ್ದಾರೆ. ಸ್ಟಾರ್ ಲಿಂಕ್ ಸಹಿತ ಕೆಲವೊಂದು ಪ್ರಮುಖ ಸ್ಯಾಟಲೈಟ್ ಕಂಪನಿಗಳು 30 ರಿಂದ 50 ರಷ್ಟು ಗುಚ್ಚಗಳನ್ನು ಹೊಂದಿರುವ ಕೃತಕ ಉಪಗ್ರಹ ಗಳನ್ನು ಹಾರಿಬಿಟ್ಟಿದೆ. ಈ ಹಿಂದೆ ಒಂದು ಎರಡು ಉಪಗ್ರಹಗಳು ಮಾತ್ರ ಗೋಚರಿಸುತ್ತಿದ್ದವು. ಇದು ಭೂಮಿಯಿಂದ 200 ರಿಂದ 300 ಕಿ.ಮೀ ಎತ್ತರದಲ್ಲಿ ಹಾರಾಡುತ್ತಿದ್ದು ಸೂರ್ಯ ಪಶ್ಚಿಮಕ್ಕೆ ಹೋದಂತೆ ಪ್ರತಿಫಲಿಸತೊಡಗಿದೆ.

ಬಾಹ್ಯಾಕಾಶ ಉದ್ಯಮಿ ಎಲಾನ್‌ ಮಸ್ಕ್ ಅವರ ‘ಸ್ಟಾರ್‌ ಲಿಂಕ್‌’ಎಂಬ ಸುಮಾರು 12 ಸಾವಿರ ಕೃತಕ ಉಪಗ್ರಹಗಳನ್ನುಆಕಾಶಕ್ಕೆ ಹಾರಿ ಬಿಡುವ ಭಾರಿ ಯೋಜನೆಯೊಂದನ್ನು ಸದ್ಯ ಹಾಕಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ರೀತಿ ಹಾರಿಬಿಡುವ ಉಪಗ್ರಹಗಳ ಸಂಖ್ಯೆ 42 ಸಾವಿರ ದಾಟುವ ಸಾಧ್ಯತೆಯೂ ಇದೆ. ಅದರಂತೆ ಈಗಾಗಲೇ ಕೃತಕ ಉಪಗ್ರಹಗಳ ಒಂದು ಗುಚ್ಛ (60 ಉಪಗ್ರಹಗಳು) ನ್ನು ಹಾರಿಬಿಟ್ಟಿದ್ದಾರೆ. ಅವು ಭೂಮಿಯ ಸುತ್ತ ತಿರುಗುತ್ತಾ ಪ್ರತಿಮನೆಗೂ ವಯರ್‌ಲೆಸ್‌ ಇಂಟರ್‌ನೆಟ್‌ ಸೇವೆಯನ್ನು ನೀಡಲಿವೆ.

ಈ ಕೌತುಕವನ್ನು ಉಡುಪಿ , ದ.ಕ ಸೇರಿದಂತೆ ಕರಾವಳಿಯ ಎಲ್ಲೆಡೆ ಈ ಕೌತುಕ ಕಾಣಿಸಿದ್ದು, ಕುತೂಹಲ ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿದ್ದು ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago