Featured

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಸೋಮವಾರ ಡಿಸೆಂಬರ್ 20 ರ ಸಂಜೆ ಆಕಾಶದಲ್ಲಿ ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ದೀಪಗಳಂತಿರುವ ನಿಗೂಢ ಹಾರುವ ವಸ್ತುವನ್ನು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದರು.

ಆದರೆ ಇದು ಖಾಸಗಿ ಟೆಲಿಕಾಂ ಕಂಪನಿಗಳು ಬಿಡುವ ಕೃತಕ ಉಪಗ್ರಹಗಳಾಗಿವೆ ಎಂದು ಖಗೋಳಶಾಸ್ತಜ್ಞರು ತಿಳಿಸಿದ್ದಾರೆ. ಸ್ಟಾರ್ ಲಿಂಕ್ ಸಹಿತ ಕೆಲವೊಂದು ಪ್ರಮುಖ ಸ್ಯಾಟಲೈಟ್ ಕಂಪನಿಗಳು 30 ರಿಂದ 50 ರಷ್ಟು ಗುಚ್ಚಗಳನ್ನು ಹೊಂದಿರುವ ಕೃತಕ ಉಪಗ್ರಹ ಗಳನ್ನು ಹಾರಿಬಿಟ್ಟಿದೆ. ಈ ಹಿಂದೆ ಒಂದು ಎರಡು ಉಪಗ್ರಹಗಳು ಮಾತ್ರ ಗೋಚರಿಸುತ್ತಿದ್ದವು. ಇದು ಭೂಮಿಯಿಂದ 200 ರಿಂದ 300 ಕಿ.ಮೀ ಎತ್ತರದಲ್ಲಿ ಹಾರಾಡುತ್ತಿದ್ದು ಸೂರ್ಯ ಪಶ್ಚಿಮಕ್ಕೆ ಹೋದಂತೆ ಪ್ರತಿಫಲಿಸತೊಡಗಿದೆ.

ಬಾಹ್ಯಾಕಾಶ ಉದ್ಯಮಿ ಎಲಾನ್‌ ಮಸ್ಕ್ ಅವರ ‘ಸ್ಟಾರ್‌ ಲಿಂಕ್‌’ಎಂಬ ಸುಮಾರು 12 ಸಾವಿರ ಕೃತಕ ಉಪಗ್ರಹಗಳನ್ನುಆಕಾಶಕ್ಕೆ ಹಾರಿ ಬಿಡುವ ಭಾರಿ ಯೋಜನೆಯೊಂದನ್ನು ಸದ್ಯ ಹಾಕಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ರೀತಿ ಹಾರಿಬಿಡುವ ಉಪಗ್ರಹಗಳ ಸಂಖ್ಯೆ 42 ಸಾವಿರ ದಾಟುವ ಸಾಧ್ಯತೆಯೂ ಇದೆ. ಅದರಂತೆ ಈಗಾಗಲೇ ಕೃತಕ ಉಪಗ್ರಹಗಳ ಒಂದು ಗುಚ್ಛ (60 ಉಪಗ್ರಹಗಳು) ನ್ನು ಹಾರಿಬಿಟ್ಟಿದ್ದಾರೆ. ಅವು ಭೂಮಿಯ ಸುತ್ತ ತಿರುಗುತ್ತಾ ಪ್ರತಿಮನೆಗೂ ವಯರ್‌ಲೆಸ್‌ ಇಂಟರ್‌ನೆಟ್‌ ಸೇವೆಯನ್ನು ನೀಡಲಿವೆ.

ಈ ಕೌತುಕವನ್ನು ಉಡುಪಿ , ದ.ಕ ಸೇರಿದಂತೆ ಕರಾವಳಿಯ ಎಲ್ಲೆಡೆ ಈ ಕೌತುಕ ಕಾಣಿಸಿದ್ದು, ಕುತೂಹಲ ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿದ್ದು ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago