ನಟ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು ಚಾಲಕ ಹಾಗೂ ಅಭಿಮಾನಿಗಳ ವಿರುದ್ಧವೂ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಅವರ ನೆರೆಮನೆಯವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಧ್ರುವ ಸರ್ಜಾ ಹಾಗೂ ಅವರ ಮ್ಯಾನೇಜರ್, ಚಾಲಕನ ಮೇಲೆ ಎಫ್ಐಆರ್ ದಾಖಲು ಮಾಡುವಂತೆ ದೂರುದಾರರು ಒತ್ತಾಯಿಸಿದ್ದಾರೆ.
ಮನೋಜ್ ಎಂಬುವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಮನೋಜ್ ಅವರು ಧ್ರುವ ಸರ್ಜಾ ಅವರ ನೆರೆ ಮನೆಯವರೇ ಆಗಿದ್ದು, ಧ್ರುವ ಸರ್ಜಾ ಅವರ ಅಭಿಮಾನಿಗಳ ವರ್ತನೆಯಿಂದ ಬೇಸತ್ತು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಧ್ರುವ ಸರ್ಜಾ ಅವರ ಮನೆಗೆ ಬರುವ ಅಭಿಮಾನಿಗಳು ರಸ್ತೆಯಲ್ಲಿ, ಮನೆಯ ಮುಂದೆ ಅಡ್ಡಾದಿಡ್ಡಿಯಾಗಿ ಗಾಡಿಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಕೂಗಾಡುತ್ತಾರೆ, ಕಿರುಚಾಡುತ್ತಾರೆ ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಿದೆ ಎಂದು ಮನೋಜ್ ದೂರಿನಲ್ಲಿ ಆರೋಪಿಸಿದ್ದಾರೆ.
ಅಭಿಮಾನಿಗಳು ಮನೆಯ ಮುಂದೆ ಸಿಗರೇಟು ಸೇದುತ್ತಾರೆ, ಗುಟ್ಕಾ ಉಗಿಯುತ್ತಾರೆ, ಮನೆಯ ಗೋಡೆಗಳ ಮೇಲೆಯೂ ಉಗಿದಿದ್ದಾರೆ, ಗಲಾಟೆ ಮಾಡುತ್ತಾರೆ. ಈ ಬಗ್ಗೆ ನಟನ ಮ್ಯಾನೇಜರ್, ಚಾಲಕನ ಬಳಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಧ್ರುವ ಸರ್ಜಾ ಅವರ ಅಭಿಮಾನಿಗಳ ಉಪಟಳದಿಂದ ಸಮಸ್ಯೆ ಆಗಿದೆ ಎಂದು ಮನೋಜ್ ಹೇಳಿದ್ದಾರೆ.
ಮನೋಜ್ ನೀಡಿರುವ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ. ಆದರೆ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಚಾಲಕರ ಮೇಲೆ ಎಫ್ಐಆರ್ ದಾಖಲು ಮಾಡಬೇಕು ಎಂದು ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಎಫ್ಐಆರ್ ದಾಖಲು ಮಾಡಲಾಗಿಲ್ಲ. ಬದಲಿಗೆ ಎನ್ಸಿಆರ್ ಅನ್ನಷ್ಟೆ ದಾಖಲು ಮಾಡಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…