Featured

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – vishwanews24

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ; ಎಫ್​ಐಆರ್ ದಾಖಲಿಸುವಂತೆ ಒತ್ತಾಯ

ನಟ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು ಚಾಲಕ ಹಾಗೂ ಅಭಿಮಾನಿಗಳ ವಿರುದ್ಧವೂ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಅವರ ನೆರೆಮನೆಯವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಧ್ರುವ ಸರ್ಜಾ ಹಾಗೂ ಅವರ ಮ್ಯಾನೇಜರ್, ಚಾಲಕನ ಮೇಲೆ ಎಫ್​​ಐಆರ್ ದಾಖಲು ಮಾಡುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಮನೋಜ್ ಎಂಬುವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಮನೋಜ್ ಅವರು ಧ್ರುವ ಸರ್ಜಾ ಅವರ ನೆರೆ ಮನೆಯವರೇ ಆಗಿದ್ದು, ಧ್ರುವ ಸರ್ಜಾ ಅವರ ಅಭಿಮಾನಿಗಳ ವರ್ತನೆಯಿಂದ ಬೇಸತ್ತು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಧ್ರುವ ಸರ್ಜಾ ಅವರ ಮನೆಗೆ ಬರುವ ಅಭಿಮಾನಿಗಳು ರಸ್ತೆಯಲ್ಲಿ, ಮನೆಯ ಮುಂದೆ ಅಡ್ಡಾದಿಡ್ಡಿಯಾಗಿ ಗಾಡಿಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಕೂಗಾಡುತ್ತಾರೆ, ಕಿರುಚಾಡುತ್ತಾರೆ ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಿದೆ ಎಂದು ಮನೋಜ್ ದೂರಿನಲ್ಲಿ ಆರೋಪಿಸಿದ್ದಾರೆ.

ಅಭಿಮಾನಿಗಳು ಮನೆಯ ಮುಂದೆ ಸಿಗರೇಟು ಸೇದುತ್ತಾರೆ, ಗುಟ್ಕಾ ಉಗಿಯುತ್ತಾರೆ, ಮನೆಯ ಗೋಡೆಗಳ ಮೇಲೆಯೂ ಉಗಿದಿದ್ದಾರೆ, ಗಲಾಟೆ ಮಾಡುತ್ತಾರೆ. ಈ ಬಗ್ಗೆ ನಟನ ಮ್ಯಾನೇಜರ್, ಚಾಲಕನ ಬಳಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಧ್ರುವ ಸರ್ಜಾ ಅವರ ಅಭಿಮಾನಿಗಳ ಉಪಟಳದಿಂದ ಸಮಸ್ಯೆ ಆಗಿದೆ ಎಂದು ಮನೋಜ್ ಹೇಳಿದ್ದಾರೆ.

ಮನೋಜ್ ನೀಡಿರುವ ದೂರು ಆಧರಿಸಿ ಪೊಲೀಸರು ಎನ್​​ಸಿಆರ್ ದಾಖಲಿಸಿದ್ದಾರೆ. ಆದರೆ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಚಾಲಕರ ಮೇಲೆ ಎಫ್​​ಐಆರ್ ದಾಖಲು ಮಾಡಬೇಕು ಎಂದು ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಎಫ್​​ಐಆರ್ ದಾಖಲು ಮಾಡಲಾಗಿಲ್ಲ. ಬದಲಿಗೆ ಎನ್​​ಸಿಆರ್ ಅನ್ನಷ್ಟೆ ದಾಖಲು ಮಾಡಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago