Featured

ಉಜಿರೆ : ಆಗಸದಲ್ಲಿ ಅಪರೂಪದ ದೃಶ್ಯ , ಸೂರ್ಯನ ಸುತ್ತ ವೃತ್ತಾಕಾರದ ಉಂಗುರ ಆಕೃತಿ -Vishwanews24

ಉಜಿರೆ, : ಸೂರ್ಯನ ಸುತ್ತ ವೃತ್ತಾಕಾರದ ಉಂಗುರದಂಥ ಆಕೃತಿಯೊಂದು ಆವರಿಸಿದ್ದು,  ಈ ಅಪರೂಪದ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಂಡುಬಂತು. ಜನರನ್ನು ಚಕಿತರನ್ನಾಗಿಸಿತು. ಈ ಅಪರೂಪದ ವಿದ್ಯಮಾನವನ್ನು ನೋಡಿದ ಜನರು ಪುಳಕಿತ ಭಾವ ಅನುಭವಿಸಿದರು.

ಮಧ್ಯಾಹ್ನ 11 ಗಂಟೆ ಸುಮಾರಿಗೆ ಆರಂಭವಾದ ಈ ವಿದ್ಯಮಾನ ಸುಮಾರು 20 ನಿಮಿಷಗಳ ವರೆಗೆ ಗೋಚರಿಸಿದ್ದು, ಜನರು ಕೂತೂಹಲದಿಂದ ವೀಕ್ಷಿಸಿದರು.

ಸೂರ್ಯನನ್ನು ಕೇಂದ್ರೀಕರಿಸಿ ವೃತ್ತಾಕಾರದಲ್ಲಿ ಪ್ರಭಾವಳಿಯೊಂದು ಕಂಡುಬಂದಿದೆ. ಉಂಗುರದಂತೆ ಕಂಗೊಳಿಸುತ್ತಿದ್ದ ಈ ವೃತ್ತಾಕಾರದೊಳಗೆ ಮೋಡ ತುಂಬಿದಂತೆ ಭಾಸವಾಗುತ್ತಿತ್ತು. ಹಲವರು ಈ ವಿದ್ಯಮಾನವನ್ನು ಕ್ಯಾಮೆರಾದಲ್ಲೂ ಸೆರೆ ಹಿಡಿದಿದ್ದಾರೆ.

ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.

     

    Vishwa News 24

    Recent Posts

    ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

    ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

    18 hours ago

    ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

    ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

    18 hours ago

    ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

    ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

    18 hours ago

    ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

    ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

    19 hours ago

    ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

    ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

    19 hours ago

    2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

    2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

    19 hours ago