Featured

ಆಗಸ್ಟ್‌ 1ರಿಂದ ಹೊಸ ಯುಪಿಐ ನಿಯಮಗಳು ಜಾರಿ : ಹಲವು ಬದಲಾವಣೆ – vishwanews24

ಯುಪಿಐ ನಿಯಮಗಳಲ್ಲಿ ಆಗಸ್ಟ್ 1, 2025 ರಿಂದ ಮಹತ್ವದ ಬದಲಾವಣೆ ಜಾರಿ

ದಿನಕ್ಕೆ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್‌ ಪರಿಶೀಲಿಸಲು ಅವಕಾಶ

ನವದೆಹಲಿ: ಯುಪಿಐ ಪೇಮೆಂಟ್ ಜನರ ಅವಿಭಾಜ್ಯ ಅಂಗವಾಗಿದೆ. ಕಿರಿಯರಿಂದ ವೃದ್ಧರವರೆಗೂ ಯುಪಿಐ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಶ್ ಲೆಸ್ ವ್ಯವಹಾರದ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಕೆಲ ಪ್ರಮುಖ ಬದಲಾವಣೆಯಾಗಲಿದೆ.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ. ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.

ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್‌ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ. ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನ ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಈ ನಿಯಮವು ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟು ಮಾಡುವ ಸಾಧ್ಯತೆ ಇದೆ.

ಒಟ್ಟಾರೆ ಯುಪಿಐ ನಿಯಮಗಳ ಬದಲಾವಣೆ ಬಳಕೆದಾರರ ದೈನಂದಿನ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರಲ್ಲ. ಆದರೆ ಸರ್ವರ್ ಮೇಲಿನ ಒತ್ತಡ ಕಡಿಮೆ ಮಾಡಲು ಈ ಕ್ರಮಕೈಗೊಳ್ಳಲಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

1 hour ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

3 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago