Featured

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ; ದೇಶದ ಜನತೆಗೆ ಪ್ರಧಾನಿ ಕರೆ – Vishwanews24

ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ..

ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ..

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ

ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು..

ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago