Featured

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ; ದೇಶದ ಜನತೆಗೆ ಪ್ರಧಾನಿ ಕರೆ – Vishwanews24

ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ..

ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ..

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ

ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು..

ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago