ಮೈಸೂರು: ಆಗಸ್ಟ್ 19 ಮತ್ತು 21 ರಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣಗೌರಿ ವೃತದ ಹಿನ್ನೆಲೆ ಬೆಟ್ಟಕ್ಕೆ ಬರುವ ಭಕ್ತರು ಹೆಚ್ಚುವ ಕಾರಣ ನಿರ್ಬಂಧ ವಿಧಿಸಲಾಗಿದೆ. ಹೆಚ್ಚು ಭಕ್ತರು ಆಗಮಿಸುವುದರಿಂದ ಸಾಮಾಜಿಕ ಅಂತರ ಹಾಗೂ ಇತೆರ ಕೊರೊನಾ ನಿಯಮಗಳ ಪಾಲನೆ ಕಷ್ಟ ಹೀಗಾಗಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಈ ಎರಡು ದಿನ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಗ್ರಾಮಸ್ಥರ ವಾಹನ ಹಾಗೂ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಸಾರ್ವಜನಿಕ ಸಾರಿಗೆ ಹಾಗೂ ಯಾವುದೇ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಸಂಚರಿಸುವಂತಿಲ್ಲ. ದೇವಾಲಯ ಅಥವಾ ದಾನಿಗಳ ವತಿಯಿಂದ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ನಿಷೇಧಿಸಲಾಗಿದೆ.
ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಹೀಗಾಗಿ ಜಿಲ್ಲೆಯಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆನೆ ದೇವಸ್ಥಾನದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇದರ ಭಾಗವಾಗಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…