ಮೈಸೂರು: ಇದೇ ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ.
ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿಂದು ಮೈಸೂರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ ಮಾಡುವ ಪ್ಲ್ಯಾನ್ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುವ ಕಾರಣದಿಂದಾಗಿ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30 ರಂದು ಒಂದು ಬಟನ್ ಒತ್ತಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ಗಳು ಫಲಾನುಭವಿಗಳ ಮೊಬೈಲ್ ನಂಬರ್ಗಳಿಗೆ ಬರುತ್ತದೆ. ಎಲ್ಲಾ ಹಣವನ್ನ ಬ್ಯಾಂಕ್ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆಯಾದ್ರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಅಂತಲೂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಇದು ಸರ್ಕಾರದ ಕಾರ್ಯಕ್ರಮ. ವಿರೋಧ ಪಕ್ಷದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿ. 2 ಸಾವಿರ ಬಸ್ಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಭಾಗದಿಂದ ಫಲಾನುಭವಿಗಳನ್ನ ಕರೆಸುತ್ತೇವೆ ಅಂತಾ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…