Featured

ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಉಡುಪಿ : ಶನಿವಾರ ಹೆಬ್ರಿ ತಾಲೂಕಿನ ಕಬ್ಬಿನಾಲೆ ಮತ್ತು ನಾಡ್ಪಾಲು ನಲ್ಲಿ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿ, ಸೋಮೇಶ್ವರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ಅಧಿಕಾರಿಗಳ ತಂಡ, ಬೆಳಗಿನ ವಾಯು ವಿಹಾರ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರೊಂದಿಗೆ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬೆಳಗಿನ ವಾಯು ವಿಹಾರ ಹೊರಟ ಅಧಿಕಾರಿಗಳಾದ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಹೆಬ್ರಿ ತಹಸೀಲ್ದಾರ್ ಪುರಂದರ ಅವರು , ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು , ಗಾಜಿನ ಬಾಟಲಿಗಳು , ಪ್ಲಾಸ್ಟಿಕ್ ಕವರ್ ಸೇರಿದಂತೆ ಮತ್ತಿತರ ಕಸವನ್ನು ಕಂಡು ಅದನ್ನು ಸ್ವಚ್ಛಗೊಳಿಸಲು ನಿರ್ಧರಿಸಿ, ಆಗುಂಬೆ ಘಾಟ್ ನ ೧೪ ನೇ ತಿರುವಿನಲ್ಲಿ ಸುಮಾರು ೨೦೦ ಮೀ ವರೆಗಿನ ರಸ್ತೆಯಲ್ಲಿ, ಪ್ರವಾಸಿಗರು ಮತ್ತು ಸಾರ್ವಜನಿಕರು ಎಸೆದಿದ್ದ ೫ ಚೀಲಕ್ಕೂ ಹೆಚ್ಚಿನ ಕಸವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ ಆಗುಂಭೆ ಘಾಟ್ ನಲ್ಲಿ ಪರಿಸರ ಸ್ವಚ್ಛತೆಗೆ ಕಾರಣರಾದರು.

ಪ್ರವಾಸಿಗರು ಮತ್ತು ಸಾರ್ವಜನಿಕರು ಆಗುಂಬೆ ಘಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸ ಬಿಸಾಡುವುದರಿಂದ , ಪಶ್ಚಿಮ ಘಟ್ಟದ ಸೂಕ್ಷö್ಮ ಪ್ರದೇಶವಾದ ಇಲ್ಲಿ ಮಾಲಿನ್ಯ ಉಂಟಾಗುವುದರ ಜೊತೆಗೆ ವಿವಿಧ ಕಾಡುಪ್ರಾಣಿಗಳ ಆರೋಗ್ಯಕ್ಕೂ ಸಹ ತೊಂದರೆಯಾಗಲಿದ್ದು, ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಿನಂತಿ ಮಾಡಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

4 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

4 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago