ಶಿವಮೊಗ್ಗ, : ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.
ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ 5.25 ಕೋಟಿ ರೂ. ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದ್ದಾರೆ.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…