Featured

ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು – vishwanews24

ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ ಬಳಿ ಸಂಭವಿಸಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಮೃತಪಟ್ಟ ವ್ಯಕ್ತಿಯನ್ನು ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಎಂದು ಗುರುತಿಸಲಾಗಿದೆ.

ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾಗಿದ್ದು, ಸ್ಕೂಟರ್ ನಲ್ಲಿ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಕೊಪ್ಪ ಸಮೀಪ ವಿದ್ಯುತ್ ತಂತಿ ಮೈಮೇಲೆ ಬಿದ್ದಿದ್ದು, ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಸ್ಥಳೀಯರ ಸಹಕಾರದಿಂದ ತುರ್ತು ವಾಹನದ ಮೂಲಕ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಹ ಸವಾರ ವಿನೋದ್ ರಾಜ್ ಘಟನೆಯಲ್ಲಿ ಪಾರಾಗಿದ್ದಾರೆ.

ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago