ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ.
ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಆಝಾನ್ ಕೂಗುವುದರಿಂದ ಬೇರೆ ಧರ್ಮಗಳ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಅರ್ಜಿದಾರರೇ ಆಝಾನ್ ಅಗತ್ಯ ಧಾರ್ಮಿಕ ಆಚರಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಝಾನ್ನಲ್ಲಿ ಇರುವ ವಿಚಾರಗಳು, ಬೇರೆ ಧರ್ಮಗಳ ಅನುಯಾಯಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವ ಅರ್ಜಿದಾರರ ವಾದವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಭಾರತದ ಸಂವಿಧಾನದ ಪ್ರಕಾರ 25 ಮತ್ತು 26ನೆ ವಿಧಿಗಳು ನಮ್ಮ ದೇಶದ ಸಂಸ್ಕೃತಿಯ ಸಹನಶೀಲತೆಯ ಮೂರ್ತರೂಪವಾಗಿವೆ. 25(1) ವಿಧಿಯು ಪ್ರತಿ ವ್ಯಕ್ತಿಯೂ ತಮ್ಮ ತಮ್ಮ ಧರ್ಮಗಳಲ್ಲಿ ಶ್ರದ್ಧೆ ಇರಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದು ಪೀಠವು ಹೇಳಿದೆ.
ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…