ಆಝಾನ್ ವಿರುದ್ಧ ಈಶ್ವರಪ್ಪ ಹೇಳಿಕೆ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ,ಕೋಮು ಗಲಭೆ ನಡೆಸುವ ಹುನ್ನಾರ : ಎಸ್‌ ಡಿಪಿಐ – Vishwanews24

Featured, ದಕ್ಷಿಣ ಕನ್ನಡ

ಆಝಾನ್ ವಿರುದ್ಧ ಈಶ್ವರಪ್ಪ ಹೇಳಿಕೆ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ,ಕೋಮು ಗಲಭೆ ನಡೆಸುವ ಹುನ್ನಾರ : ಎಸ್‌ ಡಿಪಿಐ

ಮಂಗಳೂರು: ನಗರದ ಕಾವೂರಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ಹರಕಲು ಬಾಯಿಯ ಈಶ್ವರಪ್ಪ ಭಾಷಣ ಮಾಡುವ ಸಂದರ್ಭದಲ್ಲಿ ಪಕ್ಕದ‌ ಮಸೀದಿಯಿಂದ ಅಝಾನ್ ಆಗುವಾಗ ಉದ್ದೇಶಪೂರ್ವಕವಾಗಿ ಅಝಾನ್ ನನ್ನು ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನ ನಡೆಸಿ ಕೋಮುದ್ವೇಷ ಹರಡಿಸಿ ಗಲಭೆ ಮತ್ತು ಅಶಾಂತಿ ಹಬ್ಬಲು ಪ್ರಯತ್ನಿಸಿದ ಘಟನೆಯ ಬಗ್ಗೆ ಎಸ್‌ ಡಿಪಿಐ ದ.ಕ ಜಿಲ್ಲಾ ಪ್ರಧಾ‌ನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು, ಪ್ರಪಂಚಾದ್ಯಂತ ನಮಾಝ್ ಗೆ ಮುಂಚಿತವಾಗಿ ಅಝಾನ್ ಕೊಡುವುದು ಮುಸ್ಲಿಂ ಸಮುದಾಯದ ಆರಾಧನಾ ಪದ್ಧತಿಯ ಭಾಗವಾಗಿದೆ. ಅದನ್ನು ಅಝಾನ್ ನಡೆಯುತ್ತಿರುವ ಸಂದರ್ಭದಲ್ಲೇ ಅವಹೇಳನ ನಡೆಸಿರುವುದು ಲೋಕಾದ್ಯಂತ ಇರುವ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ವಾಗಿದೆ ಹಾಗೂ ಕೋಮು ಗಲಭೆ ನಡೆಸುವ ಹುನ್ನಾರವಾಗಿದೆ. ದೇಶಾದ್ಯಂತ ವಂಶಹತ್ಯೆ ‌ ಹಾಗೂ ನರಮೇಧಗಳ ನಿರ್ಮಾಪಕರಿಗೆ ಅಝಾನ್ ಶಬ್ದದ ಇಂಪಾದ ಧ್ವನಿ ಕರ್ಕಶವಾಗಿ ಕೇಳುತ್ತಿದೆ ಇದು ಅವರ ಕೊಳಕು ಮನಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು : ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ : ಈಶ್ವರಪ್ಪ ಸ್ಪಷ್ಟನೆ – Vishwanews24

ಈ ರಾಜ್ಯ ಕಂಡ ಅತ್ಯಂತ ದುರಂತ ಮತ್ತು ದುರ್ಬಲ ನಾಯಕ ಈಶ್ವರಪ್ಪ ತನ್ನ 40% ಕಮಿಷನ್ ದಂದೆಯಿಂದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರನಾಗಿದ್ದ ಸಂತೋಷ ಪಾಟೀಲ ಆತ್ಮಹತ್ಯೆಗೈದ ಪರಿಣಾಮ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿತ್ತು. ಈ ನಾಯಕನ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲೆ ಅಸಮಾಧಾನವಿದೆ.ಇದರಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಗುವುದು ಅನುಮಾನ ಎಂದರಿತಿರುವ ಈಶ್ವರಪ್ಪ ತನ್ನ ಹರಕಲು ನಾಲಗೆ ಹರಿಯಬಿಡುವ ಮೂಲಕ ಮುಸ್ಲಿಮ್ ಸಮುದಾಯದ ಆಚಾರ ವಿಚಾರಗಳ ಬಗ್ಗೆ ಮಾತನಾಡಿ ಅಂಧ ಭಕ್ತರ ಚಪ್ಪಾಳೆ ಗಿಟ್ಟಿಸಿ ಸಂಘಪರಿವಾರ ಮುಖಂಡರ ಮನವೊಲಿಸಿ ಮುಂದಿನ ಚುನಾವಣೆಗೆ ಟಿಕೆಟ್ ಪಡೆಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಈ ಹರಕಲು ಬಾಯಿಯ ಬಿಜೆಪಿಯ ನಾಯಕ ಈ ಹಿಂದೆಯೂ ಅನೇಕ ಬಾರಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಬಗ್ಗೆ ನಾಲಗೆ ಹರಿಯಬಿಟ್ಟ ಘಟನೆ ನಡೆದಿತ್ತು. ಪೋಲಿಸ್ ಇಲಾಖೆ ಮತ್ತು ಸರ್ಕಾರ ಕಾನೂನು ಕ್ರಮ ಜರುಗಿಸದೇ ಇರುವುದರಿಂದ ಇಂತಹ ಅಶಾಂತಿ ಮೂಡಿಸುವ ಬಾಷಣಗಳು ಪುನರಾವರ್ತನೆಯಾಗುತ್ತಲೇ ಇದೆ,ಕೋಮುದ್ವೇಷದ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶ ಇದ್ದರು ಪೊಲೀಸ್ ಇಲಾಖೆ ಮೌನವಹಿಸಿರುವುದು ಖಂಡನೀಯವಾಗಿದೆ.

ಉಡುಪಿ: ಮಲ್ಪೆ ಮ್ಯಾನೇಜರ್ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣ – ಸಾವಿಗೆ ಕಾರಣರಾದ ಎಲ್ಲರ ವಿರುದ್ದ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರಗಿಸಬೇಕು : ದಲಿತ ಸಂಘಟನೆ ಆಗ್ರಹ – Vishwanews24

Leave a Reply