Featured

ಆಝಾನ್ ವಿರುದ್ಧ ಈಶ್ವರಪ್ಪ ಹೇಳಿಕೆ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ,ಕೋಮು ಗಲಭೆ ನಡೆಸುವ ಹುನ್ನಾರ : ಎಸ್‌ ಡಿಪಿಐ – Vishwanews24

ಆಝಾನ್ ವಿರುದ್ಧ ಈಶ್ವರಪ್ಪ ಹೇಳಿಕೆ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ,ಕೋಮು ಗಲಭೆ ನಡೆಸುವ ಹುನ್ನಾರ : ಎಸ್‌ ಡಿಪಿಐ

ಮಂಗಳೂರು: ನಗರದ ಕಾವೂರಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ಹರಕಲು ಬಾಯಿಯ ಈಶ್ವರಪ್ಪ ಭಾಷಣ ಮಾಡುವ ಸಂದರ್ಭದಲ್ಲಿ ಪಕ್ಕದ‌ ಮಸೀದಿಯಿಂದ ಅಝಾನ್ ಆಗುವಾಗ ಉದ್ದೇಶಪೂರ್ವಕವಾಗಿ ಅಝಾನ್ ನನ್ನು ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನ ನಡೆಸಿ ಕೋಮುದ್ವೇಷ ಹರಡಿಸಿ ಗಲಭೆ ಮತ್ತು ಅಶಾಂತಿ ಹಬ್ಬಲು ಪ್ರಯತ್ನಿಸಿದ ಘಟನೆಯ ಬಗ್ಗೆ ಎಸ್‌ ಡಿಪಿಐ ದ.ಕ ಜಿಲ್ಲಾ ಪ್ರಧಾ‌ನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು, ಪ್ರಪಂಚಾದ್ಯಂತ ನಮಾಝ್ ಗೆ ಮುಂಚಿತವಾಗಿ ಅಝಾನ್ ಕೊಡುವುದು ಮುಸ್ಲಿಂ ಸಮುದಾಯದ ಆರಾಧನಾ ಪದ್ಧತಿಯ ಭಾಗವಾಗಿದೆ. ಅದನ್ನು ಅಝಾನ್ ನಡೆಯುತ್ತಿರುವ ಸಂದರ್ಭದಲ್ಲೇ ಅವಹೇಳನ ನಡೆಸಿರುವುದು ಲೋಕಾದ್ಯಂತ ಇರುವ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ವಾಗಿದೆ ಹಾಗೂ ಕೋಮು ಗಲಭೆ ನಡೆಸುವ ಹುನ್ನಾರವಾಗಿದೆ. ದೇಶಾದ್ಯಂತ ವಂಶಹತ್ಯೆ ‌ ಹಾಗೂ ನರಮೇಧಗಳ ನಿರ್ಮಾಪಕರಿಗೆ ಅಝಾನ್ ಶಬ್ದದ ಇಂಪಾದ ಧ್ವನಿ ಕರ್ಕಶವಾಗಿ ಕೇಳುತ್ತಿದೆ ಇದು ಅವರ ಕೊಳಕು ಮನಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರಾಜ್ಯ ಕಂಡ ಅತ್ಯಂತ ದುರಂತ ಮತ್ತು ದುರ್ಬಲ ನಾಯಕ ಈಶ್ವರಪ್ಪ ತನ್ನ 40% ಕಮಿಷನ್ ದಂದೆಯಿಂದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರನಾಗಿದ್ದ ಸಂತೋಷ ಪಾಟೀಲ ಆತ್ಮಹತ್ಯೆಗೈದ ಪರಿಣಾಮ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿತ್ತು. ಈ ನಾಯಕನ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲೆ ಅಸಮಾಧಾನವಿದೆ.ಇದರಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಗುವುದು ಅನುಮಾನ ಎಂದರಿತಿರುವ ಈಶ್ವರಪ್ಪ ತನ್ನ ಹರಕಲು ನಾಲಗೆ ಹರಿಯಬಿಡುವ ಮೂಲಕ ಮುಸ್ಲಿಮ್ ಸಮುದಾಯದ ಆಚಾರ ವಿಚಾರಗಳ ಬಗ್ಗೆ ಮಾತನಾಡಿ ಅಂಧ ಭಕ್ತರ ಚಪ್ಪಾಳೆ ಗಿಟ್ಟಿಸಿ ಸಂಘಪರಿವಾರ ಮುಖಂಡರ ಮನವೊಲಿಸಿ ಮುಂದಿನ ಚುನಾವಣೆಗೆ ಟಿಕೆಟ್ ಪಡೆಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಈ ಹರಕಲು ಬಾಯಿಯ ಬಿಜೆಪಿಯ ನಾಯಕ ಈ ಹಿಂದೆಯೂ ಅನೇಕ ಬಾರಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಬಗ್ಗೆ ನಾಲಗೆ ಹರಿಯಬಿಟ್ಟ ಘಟನೆ ನಡೆದಿತ್ತು. ಪೋಲಿಸ್ ಇಲಾಖೆ ಮತ್ತು ಸರ್ಕಾರ ಕಾನೂನು ಕ್ರಮ ಜರುಗಿಸದೇ ಇರುವುದರಿಂದ ಇಂತಹ ಅಶಾಂತಿ ಮೂಡಿಸುವ ಬಾಷಣಗಳು ಪುನರಾವರ್ತನೆಯಾಗುತ್ತಲೇ ಇದೆ,ಕೋಮುದ್ವೇಷದ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶ ಇದ್ದರು ಪೊಲೀಸ್ ಇಲಾಖೆ ಮೌನವಹಿಸಿರುವುದು ಖಂಡನೀಯವಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago