Featured

ಆಝಾನ್‌ ವಿವಾದ : ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ : ಎಚ್. ಡಿ. ಕುಮಾರಸ್ವಾಮಿ – Vishwanews24

ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ..

ನಸುಕಿನಲ್ಲಿ ಸುಪ್ರಭಾತ ಮತ್ತು ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ..

ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ..

ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ  ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ ?

ಬೆಂಗಳೂರು: ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಎದ್ದಿರುವ ಆಝಾನ್ ಗದ್ದಲದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ನಸುಕಿನಲ್ಲಿ ಸುಪ್ರಭಾತ ಮತ್ತು ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ ಎಂದಿದ್ದಾರೆ.

ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಬಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಎಂದವರು ಪ್ರಶ್ನಿಸಿದ್ದಾರೆ.

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯ ಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದವರು ಇದೇ ವೇಳೆ ಸಲಹೆ ನೀಡಿದ್ದಾರೆ.

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು ಎಂದು ಎಚ್ ಡಿಕೆ ತಿಳಿಸಿದ್ದಾರೆ.

ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿ ಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ ಎಂದು ಟ್ವೀಟಿಸಿದ್ದಾರೆ.

ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಎಂದು ಇದೇ ವೇಳೆ ಸ್ಮರಿಸಿಕೊಂಡರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago