ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ ದಲ್ಲಿ ಕದ್ರಿ ದೇವಸ್ಥಾನ ಟಾರ್ಗೆಟ್ ವಿಚಾರ ಸಂಬಂಧ ಇದೀಗ ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣ ದಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದಾರೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಕದ್ರಿ ದೇವಸ್ಥಾನದ ಮೇಲೆ ಬಾಂಬ್ ಬೆದರಿಕೆ ಹಾಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ. ಅಲ್ಲದೇ ದೇವಸ್ಥಾನಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:
ಸದ್ಯ ಜಯಮ್ಮ ದೂರನ್ನು ಕದ್ರಿ ಠಾಣೆ ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದು ಕದ್ರಿ ದೇವಸ್ಥಾನ ಅಂತ ಪೋಸ್ಟ್ ಮಾಡಿತ್ತು. ಅರೇಬಿಕ್ ಭಾಷೆಯಲ್ಲಿ ಬರೆದುಕೊಂಡು ತಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರರು ಹೇಳಿರುವುದರಿಂದ ಈ ದೂರು ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…