ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ ದಲ್ಲಿ ಕದ್ರಿ ದೇವಸ್ಥಾನ ಟಾರ್ಗೆಟ್ ವಿಚಾರ ಸಂಬಂಧ ಇದೀಗ ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣ ದಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದಾರೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಕದ್ರಿ ದೇವಸ್ಥಾನದ ಮೇಲೆ ಬಾಂಬ್ ಬೆದರಿಕೆ ಹಾಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ. ಅಲ್ಲದೇ ದೇವಸ್ಥಾನಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:
ಸದ್ಯ ಜಯಮ್ಮ ದೂರನ್ನು ಕದ್ರಿ ಠಾಣೆ ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದು ಕದ್ರಿ ದೇವಸ್ಥಾನ ಅಂತ ಪೋಸ್ಟ್ ಮಾಡಿತ್ತು. ಅರೇಬಿಕ್ ಭಾಷೆಯಲ್ಲಿ ಬರೆದುಕೊಂಡು ತಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರರು ಹೇಳಿರುವುದರಿಂದ ಈ ದೂರು ನೀಡಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…