Featured

ಆಡಳಿತ ನಡೆಸುವ ಯೋಗ್ಯತೆ ಇಲ್ಲವಾದರೆ ನಾವು ಆಡಳಿತ ನಡೆಸುತ್ತೇವೆ : ಮೈತ್ರಿ ಸರ್ಕಾರದ ವಿರುದ್ಧ ಬಿಎಸ್ ವೈ -Vishwanews24

ಬೆಂಗಳೂರು: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲು ಬಿಡಲ್ಲ. ಯೋಗ್ಯತೆ ಇದ್ದರೆ ಆಡಳಿತ ನಡೆಸಲಿ. ಇಲ್ಲವಾದರೆ ನಾವು ಆಡಳಿತ ನಡೆಸುತ್ತೇವೆ,” ಎಂದು ಮಾಜಿ ಸಿಎಂ ಯಡಿಯೂರಪ್ಪ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಧ್ಯಂತರ ಚುನಾವಣೆ ಆಗುತ್ತದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಬಿಎಸ್​ವೈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಧ್ಯಂತರ ಚುನಾವಣೆ ಆಗಲು ನಾವು ಬಿಡಲ್ಲ ಎಂದರು. ಯೋಗ್ಯತೆ ಇದ್ದರೆ ಆಡಳಿತ ಮಾಡಲಿ, ಇಲ್ಲವಾದರೆ ಬಿಟ್ಟುಹೋಗಲಿ ಎಂದು ನೇರಾನೇರಾ ವಾಗ್ದಾಳಿ ನಡೆಸಿದರು.

” ನಾವು 105 ಮಂದಿ ಬಿಜೆಪಿ ಶಾಸಕರಿದ್ದೇವೆ. ದೇವೇಗೌಡರು ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್​ನವರು ಮಧ್ಯಂತರ ಚುನಾವಣೆ ಬೇಡ ಎನ್ನುತ್ತಿದ್ದಾರೆ. ಚುನಾವಣೆ ನಡೆದರೆ ಜನರಿಗೆ ಹೊರೆಯಾಗುತ್ತದೆ,” ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್, ಜೆಡಿಎಸ್​ನ ಹೇಳಿಕೆಗಳು ಗೊಂದಲದ ಗೂಡಾಗಿದೆ. ಮನಸ್ಸಿಗೆ ಬಂದಂತೆ ಮಾತಾಡಿ ಗೊಂದಲ ಸೃಷ್ಟಿಸಬಾರದು. ಒಂದೇ ವರ್ಷದಲ್ಲಿ ಮತ್ತೊಂದು ಚುನಾವಣೆಗೆ ನಾವು ಹಾಗೂ ಜನತೆ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ನವರು ಮಧ್ಯಂತರ ಚುನಾವಣೆ ಬೇಡ ಎಂದರೆ, ದೇವೇಗೌಡರು ಮಧ್ಯಂತರ ಚುನಾವಣೆ ಅಂತಾರೆ. ಮಧ್ಯಂತರ ಚುನಾವಣೆಯಿಂದ ಜನರಿಗೆ ಮತ್ತೆ ಹೊರೆ ಆಗಲಿದೆ. ಹೀಗಾಗಿ ನಾವು ಮಧ್ಯಂತರ ಚುನಾವಣೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

18 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

18 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

18 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

19 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

19 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

20 hours ago