Featured

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು – vishwanews24

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು

ಕೊಚ್ಚಿ  : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡು ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ.

ಮತ್ತೊಂದೆಡೆ ಅವ್ಯವಸ್ಥೆ ಪ್ರಶ್ನೆ ಮಾಡಿದ ಭಕ್ತರ ಮೇಲೆ ದೇಗುಲದ ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದ ಘಟನೆಗಳೂ ಕೂಡಾ ನಡೆದಿವೆ ಎನ್ನಲಾಗಿದೆ. ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆ ಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡು ವಂತೆ ಕಣ್ಣೀರಿಟ್ಟು ಕೈ ಮುಗಿದು ಬೇಡಿಕೊಳ್ಳುತ್ತಿ ರುವ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿ ನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆ ಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿವೆ.

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕಳೆದ ಕೆಲ ದಿನಗಳಿಂದ ಭಾರೀ ಪ್ರಮಾಣದ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಭಕ್ತರ ನಿರ್ವ ಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇಗುಲ ಮಂಡಳಿ ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿ ವೈಫಲ್ಯದಿಂದಾಗಿ ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಹಲವೆಡೆ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆ ಹಲ್ಲೆ ನಡೆಸಿದ ಘಟನೆಗಳ ವಿಡಿಯೋ ಕೂಡಾ ಎಲ್ಲೆಡೆ ಹರಿ ದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯ ಗಳ ಭಕ್ತರು ಪಂದಳಂನಿಂದಲೇ ಹಿಂದಿರುಗು ತ್ತಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ. ಇದು ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದ್ದು, ವಿಪಕ್ಷನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದರ ನಡುವೆಯೇ ಕೇರಳ ಹೈಕೋರ್ಟ್ ಸಹ ಕೇರಳ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚನೆ ನೀಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago