Featured

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು – vishwanews24

ಆಡಳಿತ ಮಂಡಳಿ ವೈಫಲ್ಯ –  ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ ಆಗುತ್ತಿರುವ ಭಕ್ತರು

ಕೊಚ್ಚಿ  : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡು ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ.

ಮತ್ತೊಂದೆಡೆ ಅವ್ಯವಸ್ಥೆ ಪ್ರಶ್ನೆ ಮಾಡಿದ ಭಕ್ತರ ಮೇಲೆ ದೇಗುಲದ ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದ ಘಟನೆಗಳೂ ಕೂಡಾ ನಡೆದಿವೆ ಎನ್ನಲಾಗಿದೆ. ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆ ಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡು ವಂತೆ ಕಣ್ಣೀರಿಟ್ಟು ಕೈ ಮುಗಿದು ಬೇಡಿಕೊಳ್ಳುತ್ತಿ ರುವ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿ ನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆ ಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿವೆ.

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕಳೆದ ಕೆಲ ದಿನಗಳಿಂದ ಭಾರೀ ಪ್ರಮಾಣದ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಭಕ್ತರ ನಿರ್ವ ಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇಗುಲ ಮಂಡಳಿ ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿ ವೈಫಲ್ಯದಿಂದಾಗಿ ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಹಲವೆಡೆ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆ ಹಲ್ಲೆ ನಡೆಸಿದ ಘಟನೆಗಳ ವಿಡಿಯೋ ಕೂಡಾ ಎಲ್ಲೆಡೆ ಹರಿ ದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯ ಗಳ ಭಕ್ತರು ಪಂದಳಂನಿಂದಲೇ ಹಿಂದಿರುಗು ತ್ತಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ. ಇದು ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದ್ದು, ವಿಪಕ್ಷನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದರ ನಡುವೆಯೇ ಕೇರಳ ಹೈಕೋರ್ಟ್ ಸಹ ಕೇರಳ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚನೆ ನೀಡಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

54 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago