ಬೆಂಗಳೂರು: “ಉದ್ಯೋಗ ಕೇಳಿದ ಯುವಕರಿಗೆ ಪಕೋಡಾ ಮಾರಲು ಹೇಳಿದ್ದ ಪ್ರಧಾನಿ ಮೋದಿ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಕೊಡುವುದಾಗಿ ಹೇಳಿದ್ದಾರೆ.ಆದರೆ ಮೋದಿಯವರ ಈ ಮಾತನ್ನು ನಂಬಲು ದೇಶದ ಯುವಕರು ಇಂದು ಮೂರ್ಖರಲ್ಲ” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಕಿಡಿಕಾರಿದ್ದಾರೆ.
“ಬಿಜೆಪಿ ಸರ್ಕಾರದ ಧೋರಣೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಸರಣಿ ಟ್ವೀಟ್ ಮಾಡಿದ್ದು, ಸರ್ಕಾರ ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿಯಾಗಿದೆ. ಫ್ಯಾಸಿಸ್ಟ್ಗಳು ವಿರೋಧವನ್ನು ಹತ್ತಿಕ್ಕುವುದೇ ಧಮನಕಾರಿ ನಡೆಯ ಮೂಲಕ. ಮೋದಿ ತಮ್ಮ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ED,CBI ಮತ್ತು ITಯನ್ನು ದುರ್ಬಳಕೆ ಮಾಡಿಕೊಂಡಿದಲ್ಲದೆ, ಈಗ ವಿರೋಧಿಗಳನ್ನು ಹಣಿಯಲು ದೆಹಲಿ ಪೊಲೀಸರನ್ನು ಕೂಡ ಗೂಂಡಾಗಳಾಗಿ ಪರಿವರ್ತಿಸಿದೆ” ಎಂದು ಆರೋಪಿಸಿದ್ದಾರೆ
“ಕೇಂದ್ರದ ಗೃಹ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ದೆಹಲಿ ಪೊಲೀಸರು ಅಮಿತ್ ಶಾ ಹುಕುಂ ಪಾಲಿಸುವ ಅಡಿಯಾಳುಗಳಾಗಿದ್ದಾರೆ. ಕಾಂಗ್ರೆಸ್ ನಾಯಕರಿಗೇ ಪಕ್ಷದ ಕಚೇರಿಗೆ ಹೋಗಲು ದೆಹಲಿ ಪೊಲೀಸರು ಅವಕಾಶ ನೀಡುವುದಿಲ್ಲವೆಂದರೆ ನಾವು ಯಾವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ? ದೇಶದಲ್ಲಿರುವುದು ಹಿಟ್ಲರ್ನ ಆಡಳಿತವೋ? ಅಥವಾ ಪ್ರಜಾಪ್ರಭುತ್ವದ ಆಡಳಿತವೋ” ಎಂದು ಪ್ರಶ್ನಿಸಿದ್ದಾರೆ.
“ಆಡಿದ ಮಾತಿಗೆ ಬದ್ಧನಾಗಿರಬೇಕಾಗಿರುವುದು ಉತ್ತಮ ನಾಯಕನ ಲಕ್ಷಣ.ಆದರೆ ಮೋದಿಯವರದ್ದು ಆಡುವುದೇ ಒಂದು, ಮಾಡುವುದೇ ಇನ್ನೊಂದು ಎಂಬಂತಾಗಿದೆ. ಮೋದಿಯವರಿಗೆ ಆತ್ಮಸಾಕ್ಷಿಯಿದ್ದರೆ ತಾವು ಆಡಿರುವ ಮಾತುಗಳ ವಿಡಿಯೋ ಕ್ಲಿಪ್ಪಿಂಗ್ ನೋಡಲಿ. ಆಗಲೂ ತಮ್ಮ ಮೇಲೆ ತಮಗೇ ಅಸಹ್ಯಭಾವ ಮೂಡದಿದ್ದರೆ ಅವರ ಆತ್ಮಸಾಕ್ಷಿ ಸತ್ತು ಹೋಗಿದೆ ಎಂದೇ ಅರ್ಥ “ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…