ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು,” ಎಂದು ಬಿಜೆಪಿ ನಾಯಕ ಹಾಗೂ ಪ್ರಧಾನಿ ಮೋದಿಯ ಕಟು ಟೀಕಾಕಾರ ಸುಬ್ರಮಣಿಯನ್ ಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ವ್ಯಂಗ್ಯವಾಡಿದ್ದಾರೆ.
2019ರ ಚುನಾವಣೆಯಲ್ಲಿ ಸ್ವಂತ ಬಲದಲ್ಲಿ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗಳಿಸಲಷ್ಟೆ ಶಕ್ತವಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 63 ಸ್ಥಾನಗಳ ನಷ್ಟ ಅನುಭವಿಸಿದೆ. ಹೀಗಾಗಿ ಕೇಂದ್ರದಲ್ಲಿ ಸರಕಾರ ರಚಿಸಲು ಮೈತ್ರಿಪಕ್ಷಗಳನ್ನು ಆಧರಿಸಬೇಕಾದ ಪರಿಸ್ಥಿತಿ ಬಿಜೆಪಿಗೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯವರ ಟೀಕೆ ಮಾಡಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಕಟ್ಟಾ ಸಂಘ ಪರಿವಾರದ ಸದಸ್ಯರಾಗಿರುವುದರಿಂದ, ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿವಿಧ ಬಗೆಯಲ್ಲಿ ವ್ಯಾಖ್ಯಾನಗೊಳ್ಳತೊಡಗಿದೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…