ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು,” ಎಂದು ಬಿಜೆಪಿ ನಾಯಕ ಹಾಗೂ ಪ್ರಧಾನಿ ಮೋದಿಯ ಕಟು ಟೀಕಾಕಾರ ಸುಬ್ರಮಣಿಯನ್ ಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ವ್ಯಂಗ್ಯವಾಡಿದ್ದಾರೆ.
2019ರ ಚುನಾವಣೆಯಲ್ಲಿ ಸ್ವಂತ ಬಲದಲ್ಲಿ 303 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗಳಿಸಲಷ್ಟೆ ಶಕ್ತವಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 63 ಸ್ಥಾನಗಳ ನಷ್ಟ ಅನುಭವಿಸಿದೆ. ಹೀಗಾಗಿ ಕೇಂದ್ರದಲ್ಲಿ ಸರಕಾರ ರಚಿಸಲು ಮೈತ್ರಿಪಕ್ಷಗಳನ್ನು ಆಧರಿಸಬೇಕಾದ ಪರಿಸ್ಥಿತಿ ಬಿಜೆಪಿಗೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್ ಸ್ವಾಮಿಯವರ ಟೀಕೆ ಮಾಡಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಕಟ್ಟಾ ಸಂಘ ಪರಿವಾರದ ಸದಸ್ಯರಾಗಿರುವುದರಿಂದ, ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿವಿಧ ಬಗೆಯಲ್ಲಿ ವ್ಯಾಖ್ಯಾನಗೊಳ್ಳತೊಡಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…