Featured

ಆತ್ಮಹತ್ಯೆಗೆ ಶರಣಾದ ತಮಿಳಿನ ಖ್ಯಾತ ನಟಿ ರಿಯಾಮಿಕಾ ..

ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ.

ರಿಯಾಮಿಕಾ (26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ..

ಈಕೆ ಕುಂಡ್ರತೈಲ್ ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿ-ಯಿನ್ ಅಟ್ಟಮ್ ಆರಂಬಂ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಿಯಾಮಿಕಾ ತನ್ನ ಸಹೋದರ ಪ್ರಕಾಶ್​ರೊಂದಿಗೆ ವಲಸರವಕ್ಕಮ್​ನ ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸವಿದ್ದರು. ರಿಯಾಮಿಕಾ ಮಂಗಳವಾರ ರಾತ್ರಿ ತಡವಾಗಿ ಮನೆಗೆ ಬಂದಳು. ನಾನವಳನ್ನು ಕೊನೆಯಬಾರಿಗೆ ನೋಡಿದ್ದು ಅಂದೇ, ಅಂದು ಅವಳು ತುಂಬಾ ದಣಿದಿದ್ದ ಸ್ಥಿತಿಯಲ್ಲಿದ್ದಳು ಎಂದು ಸಹೋದರ ಪ್ರಕಾಶ್​ ತಿಳಿಸಿದ್ದಾರೆ.

ಅಲ್ಲದೇ ಮಂಗಳವಾರ ರಾತ್ರಿ ರಿಯಾಮಿಕಾ ತನ್ನ ಸ್ನೇಹಿತ ದಿನೇಶ್‌ಗೆ ಕೊನೆಯ ಬಾರಿ ಕರೆ ಮಾಡಿದ್ದಾಳೆ.  ದಿನೇಶ್ ಕರೆ ಸ್ವೀಕರಿಸಲಿಲ್ಲ.ಆದರೆ ಬುಧವಾರ ದಿನೇಶ್ ಆಕೆಗೆ ಕರೆ ಮಾಡಿದಾಗ, ಆಕೆ ಕರೆ ಸ್ವೀಕರಿಸಲಿಲ್ಲ. ಈ ಕಾರಣಕ್ಕಾಗಿ ದಿನೇಶ್ ರಿಯಾಮಿಕಾಳನ್ನು ಭೇಟಿ ಮಾಡಲು ನಿರ್ಧರಿಸಿ, ರಿಯಾಮಿಕಾ ಮನೆಗೆ ಬಂದು ಪ್ರಕಾಶ್‌ನನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದಾನೆ.

ದಿನೇಶ್ ಹಾಗೂ ಪ್ರಕಾಶ್, ನಟಿ ರಿಯಾಮಿಕ್ಕ ರೂಮಿನ ಬಾಗಿಲು ತಟ್ಟಿದ್ದಾರೆ. ಆದರೆ ರಿಯಾಮಿಕ್ಕ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಪ್ರಕಾಶ್ ಕಿಟಿಕಿಯನ್ನು ಒಡೆದು ನೋಡಿದ್ದಾನೆ. ಈ ವೇಳೆ ರಿಯಾಮಿಕ್ಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದ ರಿಯಾಮಿಕಾ ಅವರಿಗೆ ಕಾಲಿವುಡ್​ನಲ್ಲಿ ಹೆಚ್ಚು ಅವಕಾಶ ಬರುತ್ತಿತ್ತಂತೆ. ಹೆಚ್ಚು ಚಿತ್ರದಲ್ಲಿ ಭಾಗಿಯಾಗದೇ ಒತ್ತಡಕ್ಕೆ ಒಳಗಾಗಿದ್ದರು. ಕೆಲಸದ ಒತ್ತಡದಿಂದ ರಿಯಾಮಿಕ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

vishwanews24
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago