Featured

ಆತ್ಮಹತ್ಯೆಗೆ ಶರಣಾದ ತಮಿಳಿನ ಖ್ಯಾತ ನಟಿ ರಿಯಾಮಿಕಾ ..

ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ.

ರಿಯಾಮಿಕಾ (26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ..

ಈಕೆ ಕುಂಡ್ರತೈಲ್ ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿ-ಯಿನ್ ಅಟ್ಟಮ್ ಆರಂಬಂ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಿಯಾಮಿಕಾ ತನ್ನ ಸಹೋದರ ಪ್ರಕಾಶ್​ರೊಂದಿಗೆ ವಲಸರವಕ್ಕಮ್​ನ ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸವಿದ್ದರು. ರಿಯಾಮಿಕಾ ಮಂಗಳವಾರ ರಾತ್ರಿ ತಡವಾಗಿ ಮನೆಗೆ ಬಂದಳು. ನಾನವಳನ್ನು ಕೊನೆಯಬಾರಿಗೆ ನೋಡಿದ್ದು ಅಂದೇ, ಅಂದು ಅವಳು ತುಂಬಾ ದಣಿದಿದ್ದ ಸ್ಥಿತಿಯಲ್ಲಿದ್ದಳು ಎಂದು ಸಹೋದರ ಪ್ರಕಾಶ್​ ತಿಳಿಸಿದ್ದಾರೆ.

ಅಲ್ಲದೇ ಮಂಗಳವಾರ ರಾತ್ರಿ ರಿಯಾಮಿಕಾ ತನ್ನ ಸ್ನೇಹಿತ ದಿನೇಶ್‌ಗೆ ಕೊನೆಯ ಬಾರಿ ಕರೆ ಮಾಡಿದ್ದಾಳೆ.  ದಿನೇಶ್ ಕರೆ ಸ್ವೀಕರಿಸಲಿಲ್ಲ.ಆದರೆ ಬುಧವಾರ ದಿನೇಶ್ ಆಕೆಗೆ ಕರೆ ಮಾಡಿದಾಗ, ಆಕೆ ಕರೆ ಸ್ವೀಕರಿಸಲಿಲ್ಲ. ಈ ಕಾರಣಕ್ಕಾಗಿ ದಿನೇಶ್ ರಿಯಾಮಿಕಾಳನ್ನು ಭೇಟಿ ಮಾಡಲು ನಿರ್ಧರಿಸಿ, ರಿಯಾಮಿಕಾ ಮನೆಗೆ ಬಂದು ಪ್ರಕಾಶ್‌ನನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದಾನೆ.

ದಿನೇಶ್ ಹಾಗೂ ಪ್ರಕಾಶ್, ನಟಿ ರಿಯಾಮಿಕ್ಕ ರೂಮಿನ ಬಾಗಿಲು ತಟ್ಟಿದ್ದಾರೆ. ಆದರೆ ರಿಯಾಮಿಕ್ಕ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಪ್ರಕಾಶ್ ಕಿಟಿಕಿಯನ್ನು ಒಡೆದು ನೋಡಿದ್ದಾನೆ. ಈ ವೇಳೆ ರಿಯಾಮಿಕ್ಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದ ರಿಯಾಮಿಕಾ ಅವರಿಗೆ ಕಾಲಿವುಡ್​ನಲ್ಲಿ ಹೆಚ್ಚು ಅವಕಾಶ ಬರುತ್ತಿತ್ತಂತೆ. ಹೆಚ್ಚು ಚಿತ್ರದಲ್ಲಿ ಭಾಗಿಯಾಗದೇ ಒತ್ತಡಕ್ಕೆ ಒಳಗಾಗಿದ್ದರು. ಕೆಲಸದ ಒತ್ತಡದಿಂದ ರಿಯಾಮಿಕ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago