ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ ಸಾವಿಗೀಡಾದ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ.
ಮೃತನನ್ನು ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಅಮಿತ್, ಹಾಸನ ಮೂಲದ ಯುವತಿಯನ್ನ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಹಾಗೂ ಅಮಿತ್ ನಡುವೆ ಗಲಾಟೆ ನಡೆದು, ಆಕೆ ತವರು ಮನೆ ಸೇರಿದ್ದಳು. ಇದರಿಂದ ಬೇಸತ್ತ ಅಮಿತ್ ಆಕೆಗೆ ವೀಡಿಯೋ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಮೊಬೈಲ್ ಕೆಳಗೆ ಬಿದ್ದಿದ್ದು, ನೇಣು ಬಿಗಿದುಕೊಂಡಿದೆ. ಇದರಿಂದ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಳೆದ ಮೂರು ವರ್ಷಗಳ ಹಿಂದೆ ಅಮಿತ್ ಯುವತಿಯನ್ನು ಮದುವೆಯಾಗಿದ್ದ. ಮೂರು ತಿಂಗಳ ಹಿಂದೆ ಅಮಿತ್ ಪತ್ನಿ ನರ್ಸಿಂಗ್ಗೆ ಕೆಲಸಕ್ಕೆ ಸೇರಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಈ ಹಿಂದೆ ಜಗಳ ನಡೆದಿತ್ತು. ಇದಾದ ಬಳಿ ಆಕೆ ತವರು ಮನೆ ಸೇರಿದ್ದಳು. ಕಳೆದ ವಾರ ಆಕೆಯನ್ನು ಕರೆದುಕೊಂಡು ಬಂದಿದ್ದ ಅಮಿತ್ ಮತ್ತೆ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದ. ಇದರಿಂದ ಮನನೊಂದ ಮಹಿಳೆ ಮರಳಿ ತವರು ಮನೆಗೆ ಹೋಗಿದ್ದಳು.
ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…