Featured

ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಜಮೀರ್ ಅಕ್ರಮ ಆಸ್ತಿ..! Vishwanews24

ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಜಮೀರ್  ಆಸ್ತಿ.!

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡುಬಂದಿದ್ದು ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಇಡಿ ಗೆ ಎಸಿಬಿ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.

ಜಮೀರ್ ಅಹ್ಮದ್‌ ಮನೆ, ಕಚೇರಿ ಸೇರಿದಂತೆ 5 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ಹಠಾತ್ ದಾಳಿಯಲ್ಲಿ ಅಕ್ರಮ ಆಸ್ತಿ ಗಳಿಸಿದ್ದಾರೆ ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ತಿಳಿಸಿದೆ.

ಜಮೀರ್ 2005ರಿಂದ ಆಗಸ್ಟ್ 2021ರ ತನಕದ ಜಮೀರ್‌ ಆಸ್ತಿಯನ್ನು ಮೌಲ್ಯ ಮಾಪನ ಮಾಡಲಾಗಿದೆ. ಜಮೀರ್ ಖಾನ್ ಅವರ ಆಸ್ತಿ ಮೌಲ್ಯ 87, 44, 05 , 057 ರೂ ಆಗಿದ್ದು ಅದು ಅವರ ಆದಾಯ ಮೂಲದ 2,031 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್‌ನಲ್ಲಿರುವ ಜಮೀರ್ ಅವರ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಶನಲ್ ಟ್ರಾವೆಲ್ಸ್ ಕಂಪನಿಯ ಕಚೇರಿ, ಓಕಾ ಅಪಾರ್ಟ್‌ಮೆಂಟ್‌ ಫ್ಲ್ಯಾಟ್ ಹಾಗೂ ಬನಶಂಕರಿಯ ಜೆ.ಕೆ ಅಸೋಸಿಯೇಟ್ಸ್‌ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ED) ನೀಡಿದ ವರದಿ ಮತ್ತು ದಾಖಲೆಗಳ ಆಧಾರದ ಮೇಲೆ 85 ಸಿಬ್ಬಂದಿಯನ್ನು ಒಳಗೊಂಡ ಎಸಿಬಿಯ ಐದು ತಂಡಗಳು ಶಾಸಕರ ನಾಲ್ಕು ಆಸ್ತಿಗಳ ಮೇಲೆ ದಾಳಿ ನಡೆಸಿತ್ತು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago