ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಜಮೀರ್ ವಿರುದ್ಧದ ಕೇಸ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಧ್ಯಂತರ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ದಾಖಲಿಸಲಾಗಿತ್ತು.
ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಶಾಸಕ ಜಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ವಿಚಾರಣೆ ಪೂರ್ಣಗೊಳಿಸಿದ ನಂತ್ರ ಆದೇಶವನ್ನು ಕಾಯ್ದಿರಿಸಿತ್ತು.
ಅಂದಹಾಗೇ ಎಸಿಬಿಯ ಶಾಸಕ ಜಮೀರ್ ಅಹ್ಮದ್ ವಿರುದ್ಧ 80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಆರೋಪದಲ್ಲಿ ಪ್ರಕರಣ ದಾಖಲಿಸಿತ್ತು. ಶೇ.2031ರಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬುದಾಗಿ ಎಸಿಬಿ ಕೇಸ್ ದಾಖಲಿಸಿತ್ತು. ಇದೇ ಪ್ರಕರಣವನ್ನು ರದ್ದು ಕೋರಿ ಶಾಸಕ ಜಮೀರ್ ಅಹ್ಮದ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…