ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು
ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಧಾನಿಗೆ ಸಾಥ್ ನೀಡಿದರು.
ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿರುವ ಡಾ. ಬಾಲಗಂಗಾಧರನಾಥ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದಲ್ಲಿನ ಮಂಗಳ ಮಂಟಪದ ಮೇಲೆ 26,250 ಚದರ ಅಡಿ ವಿಸ್ತೀರ್ಣದಲ್ಲಿ ಭೈರವೈಕ್ಯ ಮಂದಿರ ನಿರ್ಮಾಣವಾಗಿದೆ. ಮಂದಿರಕ್ಕಾಗಿ ಸುಮಾರು 80 ಕೋಟಿ ರೂ. ವೆಚ್ಚ ಮಾಡಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…