ಬೆಂಗಳೂರು: ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಜೋಡಣೆಗೆ ಸೆಪ್ಟೆಂಬರ್ 30 ಕೊನೆಯ ದಿನ. ಪಾನ್ ಕಾರ್ಡ್ ಆಧಾರ್ ಜತೆಗೆ ಲಿಂಕ್ ಆಗಿರದಿದ್ದರೆ ಅಕ್ಟೋಬರ್ 1ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವ ಸಾಧ್ಯತೆಯಿದೆ.
ಸೆಪ್ಟೆಂಬರ್ 30ರೊಳಗೆ ಎರಡೂ ಕಾರ್ಡ್ಗಳ ಲಿಂಕ್ ಆಗದೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ನಿತ್ಯ ವ್ಯವಹಾರಗಳ ಮೇಲೆ ಏನು ಪರಿಣಾಮವಾಗಲಿದೆ? ಅಥವಾ ಬೇರೆ ಎಲ್ಲಿ ಸಮಸ್ಯೆ ಉಂಟಾಗಬಹುದು?– ಈ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಲಭ್ಯವಿಲ್ಲ. ಆದರೆ, ತೆರಿಗೆದಾರರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಮುಂದುವರಿಯಬೇಕು.
ನೇರ ತೆರಿಗೆ ಕೇಂದ್ರೀಯ ಮಂಡಳಿ(ಸಿಬಿಡಿಟಿ)ಯ ಹೊಸ ನಿಯಮಗಳ ಪ್ರಕಾರ, ಪಾನ್ ಮತ್ತು ಆಧಾರ್ ಲಿಂಕ್ ಮಾಡುವಲ್ಲಿ ವಿಫಲರಾದರೆ ಪಾನ್ ನಿಷ್ಕ್ರಿಯಗೊಳ್ಳಬಹುದಾಗಿದೆ. ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಿದಂತೆ ಅಸಿಂಧುಗೊಳ್ಳುವ ಸಾಧ್ಯತೆಯಿದೆ. ಸರ್ಕಾರ ಪಾನ್ ನಿಷ್ಕ್ರಿಯಗೊಳ್ಳುವ ಬಗ್ಗೆ ಇನ್ನಷ್ಟೇ ವಿವರಿಸಬೇಕಿದೆ.
ಈಗಾಗಲೇ ಹಲವು ಬಾರಿ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ನಿಗದಿಯಾಗಿದ್ದ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಈಗ ಮತ್ತೊಮ್ಮೆ ಅವಧಿ ವಿಸ್ತರಣೆ ಅಸಾಧ್ಯ ಎನ್ನಲಾಗುತ್ತಿದೆ.
ನಮ್ಮಲ್ಲಿರುವ ಎರಡೂ ಕಾರ್ಡ್ಗಳ ಜೋಡಣೆ ಅಥವಾ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ವಿವರ–
ಹಂತ 1: ತೆರಿಗೆ ಇಲಾಖೆಯ ಇ–ಫಿಲ್ಲಿಂಗ್ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಬೇಕು
ವೆಬ್ಸೈಟ್ ಲಿಂಕ್: https://www.incometaxindiaefiling.gov.in/home
ಹಂತ 2: ಪೋರ್ಟಲ್ನಲ್ಲಿ ಪಾನ್–ಆಧಾರ್ ಲಿಂಕ್ ಆಯ್ಕೆಯನ್ನು ಕಂಡುಕೊಂಡು ಅದರ ಮೇಲೆ ಕ್ಲಿಕ್ ಮಾಡಬೇಕು
ಹಂತ 3: ನಿಗದಿತ ಸ್ಥಳದಲ್ಲಿ ಪಾನ್ ಮತ್ತು ಆಧಾರ್ ಸಂಖ್ಯೆ ನಮೂದಿಸಬೇಕು
ಹಂತ 4: ಆಧಾರ್ನಲ್ಲಿ ಇರುವಂತೆ ಹೆಸರು ನಮೂದಿಸಬೇಕು
ಹಂತ 5: ನಿಮ್ಮ ಆಧಾರ್ ಕಾರ್ಡ್ನ ಜನ್ಮದಿನಾಂಕದ ವಿವರದಲ್ಲಿ ಕೇವಲ ಹುಟ್ಟಿದ ವರ್ಷ ಮಾತ್ರ ದಾಖಲಾಗಿದ್ದರೆ; ‘I have the only year of birth in Aadhar card’ ಆಯ್ಕೆ ಕ್ಲಿಕ್ಕಿಸಬೇಕು
ಹಂತ 6: ಸರಿಯಾದ ವಿವರ ನೀಡಿರುವುದನ್ನು ಖಾತ್ರಿ ಪಡಿಸಿಕೊಂಡು ಮುಂದುವರಿಯಲು ‘I agree to validate my Aadhar details with UIDAI’ ಆಯ್ಕೆ ಕ್ಲಿಕ್ ಮಾಡಬೇಕು
ಹಂತ 7: ಪರದೆಯಲ್ಲಿ ಕಾಣಿಸುವ ವಿಶೇಷ ಕೋಡ್(captcha code) ನಮೂದಿಸಬೇಕು
ಹಂತ 8: ಅಂತಿಮವಾಗಿ ಪಾನ್ ಮತ್ತು ಆಧಾರ್ ಲಿಂಕ್ ಮನವಿಗಾಗಿ ‘Link Aadhaar’ ಆಯ್ಕೆ ಕ್ಲಿಕ್ ಮಾಡಬೇಕು. ಇಲ್ಲಿಗೆ ಕಾರ್ಡ್ಗಳ ಲಿಂಕ್ಗಾಗಿ ಮನವಿ ಪೂರ್ಣಗೊಳ್ಳುತ್ತದೆ.
ಪಾನ್–ಆಧಾರ್ ಲಿಂಕ್ ಆಗಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ವೆಬ್ಸೈಟ್ನಲ್ಲಿಯೇ ಖಾತ್ರಿ ಪಡಿಸಿಕೊಳ್ಳಬಹುದು. ಈಗಾಗಲೇ ನೀವು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುತ್ತಿದ್ದರೆ, ನಿಮ್ಮ ಪಾನ್–ಆಧಾರ್ ಲಿಂಕ್ ಆಗಿರುತ್ತದೆ. ಇದನ್ನು ಸ್ಪಷ್ಟಪಡಿಸಿಕೊಳ್ಳಲು ಮೇಲೆ ತಿಳಿಸಿದಂತೆ ಆದಾಯ ತೆರಿಗೆ ವೆಬ್ಸೈಟ್ನಲ್ಲಿ ವಿವರ ಭರ್ತಿ ಮಾಡಿ ಗಮನಿಸಿ. ಕಾರ್ಡ್ಗಳು ಲಿಂಕ್ ಆಗಿದ್ದರೆ ಕೊನೆಯ ಹಂತದ ನಂತರ, ‘Your Pan is already linked….’ ಎಂದು ತೋರಿಸುತ್ತದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…