Featured

ಆಧಾರ್ ನೋಂದಣಿ, ತಿದ್ದುಪಡಿ ಈಗ ಅಂಚೆ ಕಚೇರಿ, ಮತ್ತು ಬ್ಯಾಂಕ್‌ಗಳಲ್ಲಿ ಲಭ್ಯ : ಯಾವ ಬ್ಯಾಂಕ್ ಗಳು ಮತ್ತು ಅಂಚೆಕಚೇರಿಗಳು ಎಂದು ತಿಳಿಯಲು ಓದಿ ಈ ವರದಿ ..Vishwanews24

ಉಡುಪಿ: ಆಧಾರ್‌ ಕಾರ್ಡ್‌ನಲ್ಲಿರುವ ಹೆಸರು, ಜನ್ಮ ದಿನಾಂಕ, ವಿಳಾಸದ ಬದಲಾವಣೆ ಅಥವಾ ತಿದ್ದುಪಡಿ ಮಾಡುವ ಸಲುವಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲೆಯ ಅಂಚೆ ಇಲಾಖೆಗಳಲ್ಲಿ ಹಾಗೂ ಬ್ಯಾಂಕ್‌ಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಗಳು ಕೆಲಸ ನಿರ್ವಹಿಸುತ್ತಿದ್ದು, ಈ ಕೆಳಕಂಡ ಬ್ಯಾಂಕ್‌ ಹಾಗೂ ಅಂಚೆ ಕಚೇರಿಗಳಲ್ಲಿ ಆಧಾರ್‌ ಕಾರ್ಡ್‌ಗಳನ್ನು ನೋಂದಣಿ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆಧಾರ್‌ ತಿದ್ದುಪಡಿಗೆ ಅವಕಾಶವಿರುವ ಬ್ಯಾಂಕ್‌ ಶಾಖೆಗಳು
ಉಡುಪಿ ಇಂಡಿಯನ್‌ ಬ್ಯಾಂಕ್‌, ಹೆಬ್ರಿಯ ಫೆಡರಲ್‌ ಬ್ಯಾಂಕ್‌, ಉಡುಪಿ ಕುಂಜಿಬೆಟ್ಟುವಿನ ಕರ್ನಾಟಕ ಬ್ಯಾಂಕ್‌, ಕಾರ್ಕಳದ ಕೆಜಿ ಬ್ಯಾಂಕ್‌, ಕುಂದಾಪುರದ ಕೆನರಾ ಬ್ಯಾಂಕ್‌, ಬ್ರಹ್ಮಾವರದ ವಿಜಯ ಬ್ಯಾಂಕ್‌, ಉಡುಪಿ ಕೋರ್ಟ್‌ ರೋಡಿನ ಎಚ್‌. ಡಿ.ಎಫ್.ಸಿ. ಬ್ಯಾಂಕ್‌, ಕಾರ್ಕಳ ಬಸ್‌ ನಿಲ್ದಾಣದ ವಿಜಯ ಬ್ಯಾಂಕ್‌, ಕಾರ್ಕಳದ ಕೆನರಾ ಬ್ಯಾಂಕ್‌, ಉಡುಪಿಯ ಕೆನರಾ ಬ್ಯಾಂಕ್‌, ಮಜೂರು ಕಾಪುವಿನ ಕೆನರಾ ಬ್ಯಾಂಕ್‌, ಕುಂದಾಪುರ ಹೆಮ್ಮಾಡಿಯ ಕೆಜಿಬಿ ಬ್ಯಾಂಕ್‌, ಉಡುಪಿ ಬನ್ನಂಜೆಯ ವಿಜಯಾ ಬ್ಯಾಂಕ್‌ ಶಾಖೆ.

ಅಂಚೆ ಕಚೇರಿಗಳು
ನಿಟ್ಟೆ, ಕಾರ್ಕಳ ಗಾಂಧಿ ಮೈದಾನ ರೋಡ್‌, ಕಾಪು ಸಬ್‌ ಪೋಸ್ಟ್‌ ಆಫೀಸ್‌, ಕುಂದಾಪುರ ಗಾಂಧಿ ಮೈದಾನ, ಮಣಿಪಾಲ ಪ್ರಧಾನ ಅಂಚೆ ಕಚೇರಿ, ಉಡುಪಿ ಹೆಡ್‌ ಪೋಸ್ಟ್‌ ಆಫೀಸ್‌, ಕಾರ್ಕಳ ಬೈಲೂರು, ಕೋಟ ಉಪ ಅಂಚೆ ಕಚೇರಿ, ಅಜೆಕಾರು, ಪಡುಬಿದ್ರೆ, ಕಾರ್ಕಳ ಬಝಾರ್‌ ಅಂಚೆ ಕಚೇರಿ, ಬೆಳ್ಮಣ್‌, ಉಡುಪಿ ಕುಂಜಿಬೆಟ್ಟು, ಸಾಲಿಗ್ರಾಮ, ಹೆಬ್ರಿ, ವಂಡ್ಸೆ, ತಲ್ಲೂರು, ಪಡುಬಿದ್ರೆ ಉಪ ಕಚೇರಿ, ಪೆರ್ಡೂರು, ಪರ್ಕಳ, ಪೀಲಾರು, ಕೊಕ್ಕರ್ಣೆ, ಬಾರಕೂರು, ಹಿರಿಯಡ್ಕ, ಶಂಕರನಾರಾಯಣ, ಸಾಸ್ತಾನ, ಗಂಗೊಳ್ಳಿ, ಬ್ರಹ್ಮಾವರ, ಮುಂಡ್ಕೂರು, ಉದ್ಯಾವರ, ಮಲ್ಪೆ, ಉಡುಪಿ ಕ್ರೋಢಾಶ್ರಮ, ಮಲ್ಪೆ, ಉದ್ಯಾವರ, ಬಾರಕೂರು, ಕುಂದಾಪುರ ಶಾಸ್ತ್ರೀ ಸರ್ಕಲ್‌, ಬಸೂÅರು, ಶಿರ್ವ ಉಪ ಅಂಚೆ ಕಚೇರಿ, ಸಿದ್ದಾಪುರ, ಸಾಸ್ತಾನ ಉಪ ಕಚೇರಿ, ಕೋಟೇಶ್ವರ, ಉಡುಪಿ ಅಂಬಲಪಾಡಿ ಉಪಕಚೇರಿ, ಕೆಮ್ಮಣ್ಣು, ಹೆಜಮಾಡಿ, ಮೂಡುಬೆಳ್ಳೆ ಉಪಕಚೇರಿ, ತಲ್ಲೂರು, ಕುಂದಾಪುರ ಹೆಡ್‌ ಪೋಸ್ಟ್‌ ಆಫೀಸ್‌, ಶಂಕರಪುರ, ಕೊಲ್ಲೂರು, ತ್ರಾಸಿ, ಕಲ್ಯಾಣಪುರ, ಕುಕ್ಕಂದೂರು, ಶಿರೂರು ಕೆಳಪೇಟೆ, ಶಿರೂರು ಉಪ ಕಚೇರಿ.

ಈ ಕೇಂದ್ರಗಳಲ್ಲಿ ಕೆಲಸ ನಿರ್ವಸುತ್ತಿರುವ ಆಪರೇಟರ್‌ಗಳು ಅಂಚೆ ಇಲಾಖೆಯ ಕೆಲಸದೊಂದಿಗೆ ಪ್ರತಿ ದಿನಕ್ಕೆ 20ರಿಂದ 40 ಜನರ ನೋಂದಣಿ ತಿದ್ದುಪಡಿ ನಡೆಸಲಾಗುತ್ತದೆ. ಸಾರ್ವಜನಿಕರು ಈ ಕೇಂದ್ರಗಳಲ್ಲಿ ಕೂಡ ಆಧಾರ್‌ ನೋಂದಣಿಯನ್ನು ಮಾಡಿಸಬಹುದು.

ಅಲ್ಲದೇ ತಾಲೂಕು ಕಚೇರಿ ಕುಂದಾಪುರ, ಕಾರ್ಕಳ, ಉಡುಪಿ, ಬ್ರಹ್ಮಾವರ, ಬೈಂದೂರು, ಕಾಪು, ನಾಡ ಕಚೇರಿಗಳಾದ ಕೋಟ, ವಂಡ್ಸೆ, ಅಜೆಕಾರು ಇಲ್ಲಿರುವ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸ್ಪಂದನ ಕೇಂದ್ರಗಳಲ್ಲಿ ಸಾರ್ವಜನಿಕರು ಹೊಸತಾಗಿ ಆಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗಳನ್ನು ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

1 minute ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago