Featured

‘ಆಧುನಿಕ ಭಗೀರಥ’ ಖ್ಯಾತಿಯ 16 ಕೆರೆಗಳ ನಿರ್ಮಾತೃ ಮಂಡ್ಯದ ಕಾಮೇಗೌಡ ನಿಧನ – Vishwanews24

‘ಆಧುನಿಕ ಭಗೀರಥ’ ಖ್ಯಾತಿಯ 16 ಕೆರೆಗಳ ನಿರ್ಮಾತೃ ಮಂಡ್ಯದ ಕಾಮೇಗೌಡ ನಿಧನ

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.

ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ನಿವಾಸಿಯಾಗಿ ಕುರಿಗಾಹಿಯಾಗಿದ್ದ ಅವರು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ ಸಮಾಜದ ಪರವಾಗಿ ಪ್ರಕೃತಿ ಸಂರಕ್ಷಣೆ ಮಾಡಿದ್ದು, ಹಲವಾರು ವರ್ಷಗಳಿಂದ ಕುಂದುರು ಬೆಟ್ಟದಲ್ಲಿ 16 ಕೆರೆ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಜಲ ಮೂಲಗಳನ್ನ ಪುನರ್ಚೇತನ ಮಾಡಿದ್ದಾರೆ.

ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24

ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್‌ ಕಿ ಬಾತ್‌’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ದೊರಕ್ಕಿದ್ದವು.

ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago