ಬೆಂಗಳೂರು : ಸಚಿವ ಆನಂದ್ ಸಿಂಗ್ ಅವರ ರಾಜೀನಾಮೆ ವಿಚಾರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜೀನಾಮೆ ವಿಚಾರ ಯಾವುದೂ ಇಲ್ಲ” ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಆನಂದ್ ಸಿಂಗ್ ನನಗೆ ಮೂರು ದಶಕಗಳಿಂದ ಮಿತ್ರ, ಅವರ ವಿಚಾರಗಳನ್ನು ಅವರು ನನ್ನಲ್ಲಿ ಹೇಳಿದ್ದಾರೆ. ನಾನು ಅವರ ಮಾತನ್ನು ಕೇಳಿದ್ದೇನೆ. ರಾಜೀನಾಮೆಯ ಪ್ರಸ್ತಾಪವೇ ಇಲ್ಲ” ಎಂದಿದ್ದಾರೆ.
ಇನ್ನು “ಆನಂದ್ ಸಿಂಗ್ ನನ್ನನ್ನು ಸಂಪರ್ಕ ಮಾಡಿ ಮಾತನಾಡಿದ್ದು, ರಾಜೀನಾಮೆ ಕೊಡುವ ವಿಚಾರದ ಕುರಿತು ಮಾತನಾಡಿಲ್ಲ. ಮತ್ತೆ ಭೇಟಿಯಾಗಿ ಎಂದು ಹೇಳಿದ್ದೇನೆ. ಅವರೊಂದಿಗೆ ಮಾತುಕತೆ ನಡೆದ ನಂತರ ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದ್ದಾರೆ.
“ಬಿಜೆಪಿಯಲ್ಲಿ ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ರಾಜೀನಾಮೆ ವಿಚಾರವಾಗಿ, ಖಾತೆಯ ವಿಚಾರವಾಗಿ ಪಕ್ಷ ಏನು ನಿರ್ಣಯ ತೆಗೆದುಕೊಂಡ ಮೇಲೆ ಎಲ್ಲವೂ ತಿಳಿಯುತ್ತದೆ. ನಾನು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…