ಬೆಂಗಳೂರು : ಸಚಿವ ಆನಂದ್ ಸಿಂಗ್ ಅವರ ರಾಜೀನಾಮೆ ವಿಚಾರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜೀನಾಮೆ ವಿಚಾರ ಯಾವುದೂ ಇಲ್ಲ” ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಆನಂದ್ ಸಿಂಗ್ ನನಗೆ ಮೂರು ದಶಕಗಳಿಂದ ಮಿತ್ರ, ಅವರ ವಿಚಾರಗಳನ್ನು ಅವರು ನನ್ನಲ್ಲಿ ಹೇಳಿದ್ದಾರೆ. ನಾನು ಅವರ ಮಾತನ್ನು ಕೇಳಿದ್ದೇನೆ. ರಾಜೀನಾಮೆಯ ಪ್ರಸ್ತಾಪವೇ ಇಲ್ಲ” ಎಂದಿದ್ದಾರೆ.
ಇನ್ನು “ಆನಂದ್ ಸಿಂಗ್ ನನ್ನನ್ನು ಸಂಪರ್ಕ ಮಾಡಿ ಮಾತನಾಡಿದ್ದು, ರಾಜೀನಾಮೆ ಕೊಡುವ ವಿಚಾರದ ಕುರಿತು ಮಾತನಾಡಿಲ್ಲ. ಮತ್ತೆ ಭೇಟಿಯಾಗಿ ಎಂದು ಹೇಳಿದ್ದೇನೆ. ಅವರೊಂದಿಗೆ ಮಾತುಕತೆ ನಡೆದ ನಂತರ ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದ್ದಾರೆ.
“ಬಿಜೆಪಿಯಲ್ಲಿ ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ರಾಜೀನಾಮೆ ವಿಚಾರವಾಗಿ, ಖಾತೆಯ ವಿಚಾರವಾಗಿ ಪಕ್ಷ ಏನು ನಿರ್ಣಯ ತೆಗೆದುಕೊಂಡ ಮೇಲೆ ಎಲ್ಲವೂ ತಿಳಿಯುತ್ತದೆ. ನಾನು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…