Featured

ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ ; ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ ; ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹುಬ್ಬಳ್ಳಿ: ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ.

ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ನಿತ್ಯ ಆನ್​ಲೈನ್​ ಗೇಮ್ ಆಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಹೀಗಾಗಿ ಆನ್ ಲೈನ್ ಗೇಮ್​ನಲ್ಲಿ ಹಣವನ್ನು ಕಳೆದುಕೊಂಡಿದ್ದನು ಎನ್ನಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.

ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

20 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago