ಕಲಬುರಗಿ: ಆನ್ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಹೊಲ ಮತ್ತು ಮನೆಯಲ್ಲಿರುವ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ಸಾಲ ಮಾಡಿ ಮಗನ ವಿದ್ಯಾಭ್ಯಾಸಕ್ಕೆ ವ್ಯಯಿಸಿದ್ದೆ. ಆದರೆ ಆನ್ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆಂದು ದೂರಿನಲ್ಲಿ ವಿವರಿಸಿದ್ದಾರೆ.
ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]