Featured

ಆನ್‌ಲೈನ್ ಔಷಧ ವ್ಯಾಪಾರ ವಿರೋಧಿಸಿ ದೇಶಾದ್ಯಂತ ನಾಳೆ ಔಷಧ ಅಂಗಡಿಗಳು ಬಂದ್ ..

ಬೆಂಗಳೂರು: ಆನ್​ಲೈನ್​ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಶುಕ್ರವಾರ (ಸೆ.28) ದೇಶವ್ಯಾಪಿ ಔಷಧ ಮಳಿಗೆಗಳ ಬಂದ್​ಗೆ ಕರೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆ ಗುರುವಾರವೇ ಅಗತ್ಯ ಔಷಧ ಖರೀದಿಸಿಟ್ಟು ಕೊಳ್ಳುವುದು ಉತ್ತಮ.

ಕೇಂದ್ರ ಸರ್ಕಾರ ಜಾರಿ ಗೊಳಿಸಲು ಮುಂದಾಗಿರುವ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಒಂದು ದಿನ ಬಂದ್​ಗೆ ಕರೆ ನೀಡಿದೆ. ಹೀಗಾಗಿ ರಾಜ್ಯದಲ್ಲೂ ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಸಂಪೂರ್ಣ ಔಷಧ ಮಳಿಗೆಗಳು ಬಂದ್ ಆಗಲಿದೆ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ವಿವಿಧ ಕಾಯಿಲೆಗೆ ನಿರಂತರವಾಗಿ ಮಾತ್ರೆ ಹಾಗೂ ಔಷಧ ಸೇವಿಸುತ್ತಿರುವವರು ಮುಂಜಾಗ್ರತೆ ಯಾಗಿ ಗುರುವಾರವೇ ಖರೀದಿ ಸಿಟ್ಟುಕೊಳ್ಳುವುದು ಉತ್ತಮ.

ಆತಂಕ ಬೇಡ: ರಾಜ್ಯದಲ್ಲಿ 24 ಸಾವಿರ ಔಷಧ ಮಾರಾಟಗಾರರಿದ್ದಾರೆ. ಇವರಲ್ಲಿ 6.5 ಸಾವಿರ ಮಂದಿ ಬೆಂಗಳೂರಿನಲ್ಲಿಯೇ ಮಳಿಗೆ ಹೊಂದಿದ್ದು, ಬಂದ್ ದಿನ ಸೇವೆ ಸ್ಥಗಿತಗೊಳಿಸಲಿದ್ದಾರೆ. ಆದರೆ, ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ ಹಾಗೂ ಕಾಪೋರೇಟ್ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ರೋಗಿಗಳ ಹಿತದೃಷ್ಟಿಯಿಂದ ತೆರೆದಿಡಲಿವೆ. ಇನ್ನು ಜನರಿಕ್ ಔಷಧ ಮಳಿಗೆಯೂ ತೆರೆದಿರಲಿದೆ. ಹೀಗಾಗಿ ರಾಜ್ಯದ ಎಲ್ಲೆಡೆ ಜೀವರಕ್ಷಕ ಔಷಧಗಳು ರೋಗಿಗಳಿಗೆ ಸಿಗಲಿದ್ದು, ಆತಂಕಪಡುವ ಅಗತ್ಯವಿಲ್ಲ.

ಔಷಧ ದಾಸ್ತಾನಿಗೆ ಸೂಚನೆ: ಔಷಧ ಮಳಿಗೆಗಳ ಮಾಲೀಕರು ಬಂದ್​ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧವನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು/ಸಾರ್ವಜನಿಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ.

ಇ-ಫಾರ್ಮಸಿ ಯನ್ನು ಕೇಂದ್ರ ಸರ್ಕಾರ ಆತುರದಲ್ಲಿ ಜಾರಿಗೊಳಿಸಲು ಮುಂದಾಗಿದೆ. ರಾಜ್ಯದ ಎಲ್ಲ ಔಷಧ ಮಾರಾಟಗಾರರು ಮಳಿಗೆ ಬಂದ್ ಮಾಡಿ ಖಂಡಿಸಲಿದ್ದೇವೆ. ನ್ಯೂನತೆಯನ್ನು ಗ್ರಾಹಕರಿಗೆ ತಿಳಿಸುವುದು ನಮ್ಮ ಉದ್ದೇಶ.
ರಘುನಾಥ ರೆಡ್ಡಿ, ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಅಧ್ಯಕ್ಷ

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

51 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago