Featured

ಆನ್‌ಲೈನ್ ಔಷಧ ವ್ಯಾಪಾರ ವಿರೋಧಿಸಿ ದೇಶಾದ್ಯಂತ ನಾಳೆ ಔಷಧ ಅಂಗಡಿಗಳು ಬಂದ್ ..

ಬೆಂಗಳೂರು: ಆನ್​ಲೈನ್​ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಶುಕ್ರವಾರ (ಸೆ.28) ದೇಶವ್ಯಾಪಿ ಔಷಧ ಮಳಿಗೆಗಳ ಬಂದ್​ಗೆ ಕರೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆ ಗುರುವಾರವೇ ಅಗತ್ಯ ಔಷಧ ಖರೀದಿಸಿಟ್ಟು ಕೊಳ್ಳುವುದು ಉತ್ತಮ.

ಕೇಂದ್ರ ಸರ್ಕಾರ ಜಾರಿ ಗೊಳಿಸಲು ಮುಂದಾಗಿರುವ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಒಂದು ದಿನ ಬಂದ್​ಗೆ ಕರೆ ನೀಡಿದೆ. ಹೀಗಾಗಿ ರಾಜ್ಯದಲ್ಲೂ ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಸಂಪೂರ್ಣ ಔಷಧ ಮಳಿಗೆಗಳು ಬಂದ್ ಆಗಲಿದೆ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ವಿವಿಧ ಕಾಯಿಲೆಗೆ ನಿರಂತರವಾಗಿ ಮಾತ್ರೆ ಹಾಗೂ ಔಷಧ ಸೇವಿಸುತ್ತಿರುವವರು ಮುಂಜಾಗ್ರತೆ ಯಾಗಿ ಗುರುವಾರವೇ ಖರೀದಿ ಸಿಟ್ಟುಕೊಳ್ಳುವುದು ಉತ್ತಮ.

ಆತಂಕ ಬೇಡ: ರಾಜ್ಯದಲ್ಲಿ 24 ಸಾವಿರ ಔಷಧ ಮಾರಾಟಗಾರರಿದ್ದಾರೆ. ಇವರಲ್ಲಿ 6.5 ಸಾವಿರ ಮಂದಿ ಬೆಂಗಳೂರಿನಲ್ಲಿಯೇ ಮಳಿಗೆ ಹೊಂದಿದ್ದು, ಬಂದ್ ದಿನ ಸೇವೆ ಸ್ಥಗಿತಗೊಳಿಸಲಿದ್ದಾರೆ. ಆದರೆ, ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ ಹಾಗೂ ಕಾಪೋರೇಟ್ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ರೋಗಿಗಳ ಹಿತದೃಷ್ಟಿಯಿಂದ ತೆರೆದಿಡಲಿವೆ. ಇನ್ನು ಜನರಿಕ್ ಔಷಧ ಮಳಿಗೆಯೂ ತೆರೆದಿರಲಿದೆ. ಹೀಗಾಗಿ ರಾಜ್ಯದ ಎಲ್ಲೆಡೆ ಜೀವರಕ್ಷಕ ಔಷಧಗಳು ರೋಗಿಗಳಿಗೆ ಸಿಗಲಿದ್ದು, ಆತಂಕಪಡುವ ಅಗತ್ಯವಿಲ್ಲ.

ಔಷಧ ದಾಸ್ತಾನಿಗೆ ಸೂಚನೆ: ಔಷಧ ಮಳಿಗೆಗಳ ಮಾಲೀಕರು ಬಂದ್​ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧವನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು/ಸಾರ್ವಜನಿಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ.

ಇ-ಫಾರ್ಮಸಿ ಯನ್ನು ಕೇಂದ್ರ ಸರ್ಕಾರ ಆತುರದಲ್ಲಿ ಜಾರಿಗೊಳಿಸಲು ಮುಂದಾಗಿದೆ. ರಾಜ್ಯದ ಎಲ್ಲ ಔಷಧ ಮಾರಾಟಗಾರರು ಮಳಿಗೆ ಬಂದ್ ಮಾಡಿ ಖಂಡಿಸಲಿದ್ದೇವೆ. ನ್ಯೂನತೆಯನ್ನು ಗ್ರಾಹಕರಿಗೆ ತಿಳಿಸುವುದು ನಮ್ಮ ಉದ್ದೇಶ.
ರಘುನಾಥ ರೆಡ್ಡಿ, ಕರ್ನಾಟಕ ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಸಂಸ್ಥೆ ಅಧ್ಯಕ್ಷ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago