Featured

ಆನ್‌ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24

ಆನ್‌ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24

ತಿರುವನಂತಪುರ: ಆನ್‌ಲೈನ್ ರಮ್ಮಿ ಆಟಗಳ ಬ್ರಾಂಡ್ ಅಂಬಾಸಿಡರ್ ಆಗಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌‌ ಕೊಹ್ಲಿ, ನಟಿ ತಮನ್ನಾ ಹಾಗೂ ಮಲಯಾಳಂ ನಟ ಅಜು ವರ್ಗೀಸ್ ಅವರಿಗೆ ಕೇರಳ ಹೈಕೋರ್ಟ್ ನೋಟಿಸ್‌ ನೀಡಿದೆ.

ಆನ್‌‌ಲೈನ್‌ ರಮ್ಮಿ ಆಟಗಳನ್ನು ತಡೆಯಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎಸ್‌‌.ಎಂ.ಕುಮಾರ್‌, ನ್ಯಾ.ಎಲ್‌‌.ಕೆ.ನರೇಂದ್ರನ್‌‌‌ ಅವರನ್ನೊಳಗೊಂಡ ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ಬುಧವಾರ ನೋಟಿಸ್‌ ನೀಡಿದ್ದು, ಈ ಬಗ್ಗೆ ಕೇರಳ ಸರ್ಕಾರದಿಂದ ಉತ್ತರ ಕೇಳಿದೆ.

“ಆನ್‌‌ಲೈನ್‌ ರಮ್ಮಿ ಆಟಗಳು ಹೆಚ್ಚು ಜನಪ್ರಿಯವಾಗುತ್ತಿದ್ದು, ಈ ಆಟಗಳನ್ನು ಕಾನೂನುಬದ್ಧವಾಗಿ ನಿಷೇಧಿಸಬೇಕು. ಈಗಾಗಲೇ ಇತರ ರಾಜ್ಯಗಳು ಇವುಗಳನ್ನು ನಿಷೇಧ ಮಾಡಿವೆ. ಕೇರಳದಲ್ಲಿ 1960ರ ಕಾನೂನು ಇದೆ. ಆದರೆ, ಬೇರೆ ಯಾವುದೇ ಕಾನೂನುಗಳನ್ನು ಕೈಗೊಂಡಿಲ್ಲ” ಎಂದು ತ್ರಿಶೂರ್‌‌ ಮೂಲದ ಪೌಲಿ ವಡಕ್ಕನ್‌ ಎಂಬವರು ಆರೋಪಿಸಿದ್ದು, ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

“ಆನ್‌‌ಲೈನ್‌ ರಮ್ಮಿ ವಿಷಯಗಳನ್ನು ಮಾತ್ರ ಇದು ಒಳಗೊಂಡಿಲ್ಲ. ಬ್ರಾಂಡ್‌ ರಾಯಭಾರಿಗಳಾಗಿರುವ ಸ್ಟಾರ್‌ಗಳು ಪ್ರೇಕ್ಷಕರನ್ನು ಆಕರ್ಷಿಸಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ. ಆನ್‌‌ಲೈನ್‌ ರಮ್ಮಿಯಂತಹ ಆಟಗಳು ಜೂಜಾಟದಂತೆ ಇದೆ” ಎಂದಿದ್ದಾರೆ.

ಮೂಡುಬಿದಿರೆ :ಸಾವಿರ ಕಂಬದ ಬಸದಿಯಲ್ಲಿ ಸೇವಾರ್ಥ ಲಕ್ಷದೀಪೋತ್ಸವ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago