Featured

ಆನ್‌ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24

ಆನ್‌ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24

ತಿರುವನಂತಪುರ: ಆನ್‌ಲೈನ್ ರಮ್ಮಿ ಆಟಗಳ ಬ್ರಾಂಡ್ ಅಂಬಾಸಿಡರ್ ಆಗಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌‌ ಕೊಹ್ಲಿ, ನಟಿ ತಮನ್ನಾ ಹಾಗೂ ಮಲಯಾಳಂ ನಟ ಅಜು ವರ್ಗೀಸ್ ಅವರಿಗೆ ಕೇರಳ ಹೈಕೋರ್ಟ್ ನೋಟಿಸ್‌ ನೀಡಿದೆ.

ಆನ್‌‌ಲೈನ್‌ ರಮ್ಮಿ ಆಟಗಳನ್ನು ತಡೆಯಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎಸ್‌‌.ಎಂ.ಕುಮಾರ್‌, ನ್ಯಾ.ಎಲ್‌‌.ಕೆ.ನರೇಂದ್ರನ್‌‌‌ ಅವರನ್ನೊಳಗೊಂಡ ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ಬುಧವಾರ ನೋಟಿಸ್‌ ನೀಡಿದ್ದು, ಈ ಬಗ್ಗೆ ಕೇರಳ ಸರ್ಕಾರದಿಂದ ಉತ್ತರ ಕೇಳಿದೆ.

“ಆನ್‌‌ಲೈನ್‌ ರಮ್ಮಿ ಆಟಗಳು ಹೆಚ್ಚು ಜನಪ್ರಿಯವಾಗುತ್ತಿದ್ದು, ಈ ಆಟಗಳನ್ನು ಕಾನೂನುಬದ್ಧವಾಗಿ ನಿಷೇಧಿಸಬೇಕು. ಈಗಾಗಲೇ ಇತರ ರಾಜ್ಯಗಳು ಇವುಗಳನ್ನು ನಿಷೇಧ ಮಾಡಿವೆ. ಕೇರಳದಲ್ಲಿ 1960ರ ಕಾನೂನು ಇದೆ. ಆದರೆ, ಬೇರೆ ಯಾವುದೇ ಕಾನೂನುಗಳನ್ನು ಕೈಗೊಂಡಿಲ್ಲ” ಎಂದು ತ್ರಿಶೂರ್‌‌ ಮೂಲದ ಪೌಲಿ ವಡಕ್ಕನ್‌ ಎಂಬವರು ಆರೋಪಿಸಿದ್ದು, ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

“ಆನ್‌‌ಲೈನ್‌ ರಮ್ಮಿ ವಿಷಯಗಳನ್ನು ಮಾತ್ರ ಇದು ಒಳಗೊಂಡಿಲ್ಲ. ಬ್ರಾಂಡ್‌ ರಾಯಭಾರಿಗಳಾಗಿರುವ ಸ್ಟಾರ್‌ಗಳು ಪ್ರೇಕ್ಷಕರನ್ನು ಆಕರ್ಷಿಸಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ. ಆನ್‌‌ಲೈನ್‌ ರಮ್ಮಿಯಂತಹ ಆಟಗಳು ಜೂಜಾಟದಂತೆ ಇದೆ” ಎಂದಿದ್ದಾರೆ.

ಮೂಡುಬಿದಿರೆ :ಸಾವಿರ ಕಂಬದ ಬಸದಿಯಲ್ಲಿ ಸೇವಾರ್ಥ ಲಕ್ಷದೀಪೋತ್ಸವ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago