ಬೆಂಗಳೂರು: ಉತ್ತಮ ಉದ್ದೇಶದಿಂದ ನಾವು ಆನ್ ಲೈನ್ ಗೇಮಿಂಗ್ ನಿರ್ಬಂಧಗಳ ಕಾಯ್ದೆ ತಂದಿದ್ದೆವು. ಆದರೆ ಈಗ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಮತ್ತೆ ಚರ್ಚಿಸಿ ಕ್ರಮಬದ್ಧವಾಗಿ ಕಾಯ್ದೆ ತರುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ನೀಡಿದ ಆದೇಶದ ಪ್ರತಿ ತರಿಸಿ ಪರಿಶೀಲನೆ ಮಾಡುತ್ತೇವೆ. ಕೋರ್ಟ್ ಯಾವುದರ ಬಗ್ಗೆ ಹೇಳಿದೆ, ಯಾವ ಕಲಂ ತೆಗೆಯಬಹುದು ಎಂದು ನೋಡುತ್ತೇವೆ. ಮತ್ತೆ ಕಾಯ್ದೆ ಜಾರಿಗೊಳಿಸುತ್ತೇವೆ ಎಂದರು.
ಹೈಕೋರ್ಟ್ ಆದೇಶವನ್ನು ನಾವು ಒಪ್ಪುತ್ತೇವೆ. ಆದರೆ ಆನ್ ಲೈನ್ ಗೇಮ್ ಗೆ ಸಂಪೂರ್ಣವಾಗಿ ಅವಕಾಶ ಕೊಟ್ಟಿಲ್ಲ. ಹಣವಿಟ್ಟು ಆಡಲು ಅವಕಾಶ ನೀಡಿಲ್ಲ. ಎಲ್ಲಾ ಸಾಧ್ಯತೆಗಳ ಬಗ್ಗೆ ಮತ್ತೊಮ್ಮೆ ಕೂತು ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.
ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ನಿರ್ಬಂಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದು ಪಡಿಸಿದೆ ಆನ್ಲೈನ್ ಗೇಮ್ ನಿಷೇಧಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಗ್ಯಾಲಕ್ಟಸ್ ಫನ್ವೇರ್ ಟೆಕ್ನಾಲಜೀಸ್ ಮತ್ತಿತರೆ ಕಂಪನಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ 12 ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನೀಡಿದೆ.
ಆನ್ಲೈನ್ ಗೇಮ್ ನಿಷೇಧಿಸಲು ರಾಜ್ಯ ಸರ್ಕಾರ ಪೊಲೀಸ್ ಕಾಯ್ದೆ-1963ಕ್ಕೆ ತಿದ್ದುಪಡಿ ತಂದಿರುವ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆದ್ದರಿಂದ, ಕಾಯ್ದೆಯ ಸಂಬಂಧಪಟ್ಟ ತಿದ್ದುಪಡಿಯನ್ನು ರದ್ದುಪಡಿಸುತ್ತಿದ್ದೇವೆ. ಆದರೆ, ಆನ್ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ನಿಯಮಗಳಿಗೆ ಅನುಸಾರವಾಗಿ ಹೊಸ ಕಾಯ್ದೆ ತರಲು ಸರ್ಕಾರ ಸ್ವತಂತ್ರವಾಗಿದ್ದು, ಈ ತೀರ್ಪು ಅದಕ್ಕೆ ಯಾವುದೇ ತಡೆ ಒಡ್ಡುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…