ಬೆಂಗಳೂರು: ಉತ್ತಮ ಉದ್ದೇಶದಿಂದ ನಾವು ಆನ್ ಲೈನ್ ಗೇಮಿಂಗ್ ನಿರ್ಬಂಧಗಳ ಕಾಯ್ದೆ ತಂದಿದ್ದೆವು. ಆದರೆ ಈಗ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಮತ್ತೆ ಚರ್ಚಿಸಿ ಕ್ರಮಬದ್ಧವಾಗಿ ಕಾಯ್ದೆ ತರುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ನೀಡಿದ ಆದೇಶದ ಪ್ರತಿ ತರಿಸಿ ಪರಿಶೀಲನೆ ಮಾಡುತ್ತೇವೆ. ಕೋರ್ಟ್ ಯಾವುದರ ಬಗ್ಗೆ ಹೇಳಿದೆ, ಯಾವ ಕಲಂ ತೆಗೆಯಬಹುದು ಎಂದು ನೋಡುತ್ತೇವೆ. ಮತ್ತೆ ಕಾಯ್ದೆ ಜಾರಿಗೊಳಿಸುತ್ತೇವೆ ಎಂದರು.
ಹೈಕೋರ್ಟ್ ಆದೇಶವನ್ನು ನಾವು ಒಪ್ಪುತ್ತೇವೆ. ಆದರೆ ಆನ್ ಲೈನ್ ಗೇಮ್ ಗೆ ಸಂಪೂರ್ಣವಾಗಿ ಅವಕಾಶ ಕೊಟ್ಟಿಲ್ಲ. ಹಣವಿಟ್ಟು ಆಡಲು ಅವಕಾಶ ನೀಡಿಲ್ಲ. ಎಲ್ಲಾ ಸಾಧ್ಯತೆಗಳ ಬಗ್ಗೆ ಮತ್ತೊಮ್ಮೆ ಕೂತು ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.
ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ನಿರ್ಬಂಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದು ಪಡಿಸಿದೆ ಆನ್ಲೈನ್ ಗೇಮ್ ನಿಷೇಧಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಗ್ಯಾಲಕ್ಟಸ್ ಫನ್ವೇರ್ ಟೆಕ್ನಾಲಜೀಸ್ ಮತ್ತಿತರೆ ಕಂಪನಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ 12 ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನೀಡಿದೆ.
ಆನ್ಲೈನ್ ಗೇಮ್ ನಿಷೇಧಿಸಲು ರಾಜ್ಯ ಸರ್ಕಾರ ಪೊಲೀಸ್ ಕಾಯ್ದೆ-1963ಕ್ಕೆ ತಿದ್ದುಪಡಿ ತಂದಿರುವ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆದ್ದರಿಂದ, ಕಾಯ್ದೆಯ ಸಂಬಂಧಪಟ್ಟ ತಿದ್ದುಪಡಿಯನ್ನು ರದ್ದುಪಡಿಸುತ್ತಿದ್ದೇವೆ. ಆದರೆ, ಆನ್ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ನಿಯಮಗಳಿಗೆ ಅನುಸಾರವಾಗಿ ಹೊಸ ಕಾಯ್ದೆ ತರಲು ಸರ್ಕಾರ ಸ್ವತಂತ್ರವಾಗಿದ್ದು, ಈ ತೀರ್ಪು ಅದಕ್ಕೆ ಯಾವುದೇ ತಡೆ ಒಡ್ಡುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…