Featured

ಆನ್ ಲೈನ್ ಗೇಮಿಂಗ್ : ಕ್ರಮಬದ್ಧವಾಗಿ ಮತ್ತೆ  ನಿಷೇಧ ಕಾಯ್ದೆ ತರುತ್ತೇವೆ: ಆರಗ ಜ್ಞಾನೇಂದ್ರ – Vishwanews24

ಆನ್ ಲೈನ್ ಗೇಮಿಂಗ್ : ಕ್ರಮಬದ್ಧವಾಗಿ ಮತ್ತೆ  ನಿಷೇಧ ಕಾಯ್ದೆ ತರುತ್ತೇವೆ: ಆರಗ ಜ್ಞಾನೇಂದ್ರ – Vishwanews24

ಬೆಂಗಳೂರು: ಉತ್ತಮ ಉದ್ದೇಶದಿಂದ ನಾವು ಆನ್ ಲೈನ್ ಗೇಮಿಂಗ್ ನಿರ್ಬಂಧಗಳ ಕಾಯ್ದೆ ತಂದಿದ್ದೆವು. ಆದರೆ ಈಗ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಮತ್ತೆ ಚರ್ಚಿಸಿ ಕ್ರಮಬದ್ಧವಾಗಿ ಕಾಯ್ದೆ ತರುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.

ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ನೀಡಿದ ಆದೇಶದ ಪ್ರತಿ ತರಿಸಿ ಪರಿಶೀಲನೆ ಮಾಡುತ್ತೇವೆ. ಕೋರ್ಟ್ ಯಾವುದರ ಬಗ್ಗೆ ಹೇಳಿದೆ, ಯಾವ ಕಲಂ ತೆಗೆಯಬಹುದು ಎಂದು ನೋಡುತ್ತೇವೆ. ಮತ್ತೆ ಕಾಯ್ದೆ ಜಾರಿಗೊಳಿಸುತ್ತೇವೆ ಎಂದರು.

ಹೈಕೋರ್ಟ್ ಆದೇಶವನ್ನು ನಾವು ಒಪ್ಪುತ್ತೇವೆ. ಆದರೆ ಆನ್ ಲೈನ್ ಗೇಮ್ ಗೆ ಸಂಪೂರ್ಣವಾಗಿ ಅವಕಾಶ ಕೊಟ್ಟಿಲ್ಲ. ಹಣವಿಟ್ಟು ಆಡಲು ಅವಕಾಶ ನೀಡಿಲ್ಲ. ಎಲ್ಲಾ ಸಾಧ್ಯತೆಗಳ ಬಗ್ಗೆ ಮತ್ತೊಮ್ಮೆ ಕೂತು ‌ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿದರು.

ರಾಜ್ಯದಲ್ಲಿ ಆನ್‌ಲೈನ್‌ ಗೇಮಿಂಗ್‌ ನಿರ್ಬಂಧಿಸಲು ಕರ್ನಾಟಕ ಪೊಲೀಸ್‌ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್‌ ರದ್ದು ಪಡಿಸಿದೆ ಆನ್‌ಲೈನ್‌ ಗೇಮ್‌ ನಿಷೇಧಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಆಲ್‌ ಇಂಡಿಯಾ ಗೇಮಿಂಗ್‌ ಫೆಡರೇಷನ್‌ ಆಫ್ ಇಂಡಿಯಾ ಹಾಗೂ ಗ್ಯಾಲಕ್ಟಸ್‌ ಫ‌ನ್ವೇರ್‌ ಟೆಕ್ನಾಲಜೀಸ್‌ ಮತ್ತಿತರೆ ಕಂಪನಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ 12 ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಮುಖ್ಯ ನ್ಯಾ.ರಿತುರಾಜ್‌ ಅವಸ್ಥಿ ಹಾಗೂ ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ನೀಡಿದೆ.

ಆನ್‌ಲೈನ್‌ ಗೇಮ್‌ ನಿಷೇಧಿಸಲು ರಾಜ್ಯ ಸರ್ಕಾರ ಪೊಲೀಸ್‌ ಕಾಯ್ದೆ-1963ಕ್ಕೆ ತಿದ್ದುಪಡಿ ತಂದಿರುವ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆದ್ದರಿಂದ, ಕಾಯ್ದೆಯ ಸಂಬಂಧಪಟ್ಟ ತಿದ್ದುಪಡಿಯನ್ನು ರದ್ದುಪಡಿಸುತ್ತಿದ್ದೇವೆ. ಆದರೆ, ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ನಿಯಮಗಳಿಗೆ ಅನುಸಾರವಾಗಿ ಹೊಸ ಕಾಯ್ದೆ ತರಲು ಸರ್ಕಾರ ಸ್ವತಂತ್ರವಾಗಿದ್ದು, ಈ ತೀರ್ಪು ಅದಕ್ಕೆ ಯಾವುದೇ ತಡೆ ಒಡ್ಡುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

21 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago